ನಿಮ್ಮ ನೋವು ಅರ್ಥವಾಗುತ್ತೆ: ಬಿಎಸ್ವೈ ಮೊಮ್ಮಗಳ ಸಾವಿಗೆ ಸಿದ್ದರಾಮಯ್ಯ ಕಂಬನಿ*
ಬೆಂಗಳೂರು: ಮಾಜಿ ಸಿಎಂ ಬಿಎಸ್ವೈ ಮೊಮ್ಮಗಳು ಸೌಂದರ್ಯ ಅವರ ಸಾವಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ.
ಟ್ವೀಟ್ ಮೂಲಕ ಸಾಂತ್ವನ ಹೇಳಿರುವ ಸಿದ್ದರಾಮಯ್ಯ ಈ ಸಾವಿನ ನೋವು ಸಹಿಸುವ ಶಕ್ತಿ ಯಡಿಯೂರಪ್ಪ ಕುಟುಂಬಕ್ಕೆ ದೊರೆಯಲಿ ಎಂದು ಸಿದ್ದರಾಮಯ್ಯ ಪ್ರಾರ್ಥಿಸಿದ್ದಾರೆ. ಭುಜದೆತ್ತರಕ್ಕೆ ಬೆಳೆದ ಮಕ್ಕಳು, ಕುಟುಂಬ ಸದಸ್ಯರ ಅಗಲಿಕೆಯಿಂದ ಆಗುವ ನೋವು, ಸಂಕಟವನ್ನು ನಾನು ಕೂಡ ಕಂಡಿದ್ದೇನೆ, ಅನುಭವಿಸಿದ್ದೇನೆ. ಸೌಂದರ್ಯ ಅಗಲಿಕೆಯ ದುಃಖ ಭರಿಸುವ ಶಕ್ತಿ ಕರುಣಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.




