ಬಸವರಾಜ ಬೊಮ್ಮಾಯಿ ಅವರ ಸಾಧನೆ ಜಾಹಿರಾತಿಗೆ ಸೀಮಿತ: ಸಿದ್ದರಾಮಯ್ಯ
ಬೆಂಗಳೂರು: ಬಸವರಾಜ ಬೊಮ್ಮಾಯಿ ಅವರ ಆರು ತಿಂಗಳ ಸರ್ಕಾರದ ಸಾಧನೆ ಶೂನ್ಯ. ಬರೀ ಹೇಳಿಕೆ, ಜಾಹಿರಾತಿಗೆ ಸೀಮಿತವಾಗಿದೆ. ಇವರು ಕೇಂದ್ರದಿಂದ ಅನುದಾನ ತರುವಲ್ಲಿ ವಿಫಲರಾಗಿದ್ದಾರೆ, ರಾಜ್ಯದಲ್ಲಿ ಸಂಪನ್ಮೂಲ ಕ್ರೋಢೀಕರಿಸುವಲ್ಲೂ ವಿಫಲರಾಗಿದ್ದಾರೆ. ಅಭಿವೃದ್ಧಿ ಇವರ ಕಾಲದಲ್ಲಿ ಹಿಂದಕ್ಕೆ ಹೋಗಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪ ಮಾಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ವ್ಯಾಸಂಗಕ್ಕೆ ಸಾಲ ಪಡೆಯುವ ವ್ಯವಸ್ಥೆ ಜಾರಿಯಾಗಿತ್ತು. ವಿದ್ಯಾಸಿರಿ ಯೋಜನೆ ಮೂಲಕ ನೆರವು ಕೊಡುತ್ತಿದ್ದೆವು. ಅದನ್ನು ಈಗ ನಿಲ್ಲಿಸಿದ್ದಾರೆ. ವಿದ್ಯಾನಿಧಿ ಪೂರ್ಣ ಪ್ರಮಾಣದಲ್ಲಿ ಅನುಕೂಲವಾಗುತ್ತಿಲ್ಲ ಎಂದರು.




