ಮಹೀಂದ್ರಾ ಶೋ ರೂಂನಲ್ಲಿ ರೈತನಿಗೆ ಅವಮಾನ ಪ್ರಕರಣ:
ರೈತನ ಮನೆಗೆ ವಾಹನ ಡೆಲಿವರಿ ಮಾಡಿ, ಶುಭ ಕೋರಿದ ಆನಂದ್ ಮಹೀಂದ್ರಾ
ತುಮಕೂರು: ಮಹೀಂದ್ರಾ ಶೋ ರೂಂನಲ್ಲಿ ರೈತನಿಗೆ ಅಪಮಾನ ಮಾಡಿದ ಪ್ರಕರಣ ದೇಶಾದ್ಯಂತ ಸುದ್ದಿಯಾಗಿತ್ತು. ಇದೀಗ ರೈತನ ಮನೆಗೆ ಮಹೀಂದ್ರ ಗೂಡ್ಸ್ ವಾಹನ ಆಗಮಿಸಿದೆ.
ನಿನ್ನೆ (ಜ.28) ರಂದು ರೈತ ಕೆಂಪೇಗೌಡನ ಮನೆಗೆ ಕಂಪನಿ ವಾಹನ ಡೆಲಿವರಿ ಮಾಡಿದೆ. ಅಷ್ಟೇ ಅಲ್ಲದೆ, ಈ ಕುರಿತು ಸ್ವತಃ ಆನಂದ್ ಮಹೀಂದ್ರ ಟ್ವೀಟ್ ಮಾಡಿದ್ದಾರೆ.
ರೈತ ಕೆಂಪೇಗೌಡರಿಂದ ಮಹಿಂದ್ರ ಗೂಡ್ಸ್ ವಾಹನ ಖರೀದಿ ಮಾಡಲಾಗಿದೆ. ಈ ಬಗ್ಗೆ ರೈತ ಕೆಂಪೇಗೌಡರ ಸಂತಸ ಹಂಚಿಕೊಂಡಿದ್ದಾರೆ. ಕಾರು ಖರೀದಿಗೆ ಬಂದ ಯುವ ರೈತರಿಗೆ ಅವಮಾನ ಮಾಡಿದ ಘಟನೆ ತುಮಕೂರಿನ ರಾಮನಪಾಳ್ಯದಲ್ಲಿ ನಡೆದಿತ್ತು.
ಬೊಲೆರೋ ಗೂಡ್ಸ್ ವಾಹನ ಖರೀದಿಸಲು ಶೋರೂಂಗೆ ಬಂದಿದ್ದ ತಾಲೂಕಿನ ಹೆಬ್ಬೂರು ಹೋಬಳಿಯ ರಾಮನಪಾಳ್ಯ ನಿವಾಸಿ ಯುವರೈತ ಕೆಂಪೇಗೌಡಗೆ ಅವಮಾನ ಮಾಡಲಾಗಿತ್ತು.
ಯುವಕನ ವೇಷಭೂಷಣ ನೋಡಿ ಶೋರೂಂನಲ್ಲಿ ಅವಮಾನ ಮಾಡಿದ್ದಾರೆ ಎಂದು ತಿಳಿದುಬಂದಿತ್ತು.