March 21, 2026

ಕಾಡಾನೆ ದಾಳಿಗೆ ಸಿಲುಕಿ ಹುಣಸೂರಿನ ವ್ಯಕ್ತಿ ಮೃತ್ಯು

0
image_editor_output_image888962581-1643865169367.jpg

ಮೈಸೂರು: ಜಿಲ್ಲೆಯ ಹುಣಸೂರು ತಾಲ್ಲೂಕಿನ ಕೊಳವಿಗೆ ಗ್ರಾಮದ ನಿವಾಸಿ ರಾಜೇಶ್ (55) ಅವರು ಆನೆ ದಾಳಿಗೆ ಸಿಲುಕಿ ಮೃತಪಟ್ಟಿದ್ದಾರೆ.

ಇವರು ಬುಧವಾರ ರಾತ್ರಿ ಮನೆ ಹಿತ್ತಿಲಿನಲ್ಲಿ ಹಸುವಿಗೆ ಹುಲ್ಲು ತರಲು ಹೋದ ಸಮಯದಲ್ಲಿ ಆನೆ ತುಳಿದಿದೆ.

ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿದ್ದರು. ಹುಲಿ ಯೋಜನಾ ನಿರ್ದೇಶಕರು ಬರಬೇಕು ಎಂದು ಸ್ಥಳಿಯರು ಪಟ್ಟು ಹಿಡಿದಿದ್ದಾರೆ.

ತಾಲ್ಲೂಕಿನ ನಾಗಾಪುರ ಪುನರ್ವಸತಿ ಕೇಂದ್ರದ 6 ನೇ ಬ್ಲಾಕ್ ನ ರಾಜು ಎಂಬುವವರ ಮನೆಯನ್ನು ಕಾಡಾನೆ ಜಖಂಗೊಳಿಸಿದೆ. ಬೆಳಿಗ್ಗೆ 6 ಗಂಟೆಗೆ ನುಗ್ಗಿದ ಕಾಡಾನೆ ಹಿಂಡು ಗಿರಿಜನರ ಬೆಳೆಯನ್ನು ದ್ವಂಸಗೊಳಿಸಿದೆ.

Leave a Reply

Your email address will not be published. Required fields are marked *

You may have missed

error: Content is protected !!