ಪದ್ಮಶ್ರೀ ಪುರಸ್ಕೃತ ಅಮೈ ಮಹಾಲಿಂಗ ನಾಯ್ಕ ಗೆ ವಿಟ್ಲ ಕಾಂಗ್ರೆಸ್ ನಿಂದ ಸನ್ಮಾನ
ವಿಟ್ಲ: ಪದ್ಮಶ್ರೀ ಪುರಸ್ಕೃತ ಅಮೈ ಮಹಾಲಿಂಗ ನಾಯ್ಕ ಅವರನ್ನು ವಿಟ್ಲ – ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪುತ್ತೂರು ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಅವರು ಸನ್ಮಾನಿಸಿದರು.
ವಿಟ್ಲ – ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜಾರಾಮ ಕೆ. ಬಿ., ಅಳಿಕೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಜಗದೀಶ ಶೆಟ್ಟಿ ಮುಳಿಯ, ಕೇಪು ಗ್ರಾಮ ಪಂಚಾಯಿತಿ ಸದಸ್ಯ ಅಬ್ದುಲ್ ಕರೀಂ ಕುದ್ದುಪದವು, ಕೆಪಿಸಿಸಿ ಕಾರ್ಯದರ್ಶಿ ಎಂ ಎಸ್ ಮಹ್ಮದ್, ಡಿಸಿಸಿ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಚಂದ್ರ ಆಳ್ವ, ವಕ್ತಾರ ರಮಾನಾಥ ವಿಟ್ಲ, ವಿಟ್ಲ ನಗರ ಕಾಂಗ್ರೆಸ್ ಅಧ್ಯಕ್ಷ ವಿ. ಕೆ. ಎಂ. ಅಶ್ರಫ್, ಶ್ರೀಧರ ಬಾಳೆಕಲ್ಲು, ಅಶೋಕ್ ಡಿ ಸೋಜ ಪೆರುವಾಯಿ, ಬಾಲಕೃಷ್ಣ ಶೆಟ್ಟಿ ಬೇಂಗ್ರೋಡಿ, ಸುಧಾಕರ ಕೇಪು, ಕೇಶವ ನಾಯ್ಕ, ಕೃಷ್ಣಪ್ಪ ಕೋಪ್ರೆ, ದನಂಜಯ ಗೌಡ ಕೇಪು, ಇಕ್ಬಾಲ್ ಮಣಿಪಪದವು ಮತ್ತಿತರರು ಉಪಸ್ಥಿತರಿದ್ದರು.




