March 21, 2026

ಮಂಗಳೂರು: ಕರಿಮಣಿ, ಮೊಬೈಲ್ ಕಳವುಗೈದು ಪರಾರಿಯಾಗಿದ್ದ ಆರೋಪಿಯ ಬಂಧನ

0
image_editor_output_image1937556807-1643950473095.jpg

ಮಂಗಳೂರು: ಜನತಾ ಕಾಲೋನಿಯ ಮನೆಯೊಂದಕ್ಕೆ ನುಗ್ಗಿ ಕರಿಮಣಿ ಮತ್ತು ಮೊಬೈಲ್ ಕಳವುಗೈದು ಪರಾರಿಯಾಗಿದ್ದ ಆರೋಪಿಯನ್ನು ಸುರತ್ಕಲ್ ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಬಂಧಿತನನ್ನು ಕಾಟಿಪಳ್ಳದ ಕೃಷ್ಣಾಪುರ 7 ನೇ ಬ್ಲಾಕ್ ನಿವಾಸಿ ಅಶ್ರಫ್ (24) ಎಂದು ಗುರುತಿಸಲಾಗಿದೆ.

ಇಡ್ಯ ಗ್ರಾಮದ ಜನತಾ ಕಾಲನಿಯ ಸರಕಾರಿ ಶಾಲೆಯ ಬಳಿಯ ನಿವಾಸಿ ಸುನೀತಾ ಎಂಬವರು ಜ.17ರಂದು ಅಪರಾಹ್ನ 3ರಿಂದ 4:30ರ ಮಧ್ಯೆ ಹೊರಗೆ ಹೋಗಿದ್ದ ವೇಳೆ ಬಾಗಿಲಿನ ಬೀಗ ಮುರಿದು ಒಳ ನುಗ್ಗಿದ ಆರೋಪಿ 24 ಗ್ರಾಂ ತೂಕದ ಕರಿಮಣಿ ಸರ ಮತ್ತು ಮೊಬೈಲ್ ಕಳವು ಮಾಡಿರುವುದಾಗಿ ಪೊಲೀಸರಿಗೆ ದೂರು ನೀಡಲಾಗಿತ್ತು. ಅದರಂತೆ ಗುರುವಾರ ಸುರತ್ಕಲ್ ಪೊಲೀಸರು ಸೊತ್ತು ಸಮೇತ ಆರೋಪಿಯನ್ನು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!