ಕುಂದಾಪುರ: ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಣೆ:
ಪೋಷಕರಿಂದ ಶಾಲೆಗೆ ಮುತ್ತಿಗೆ
ಕುಂದಾಪುರ: ಜಿಲ್ಲೆಯ ಕೆಲವು ಆರಂಭವಾಗಿರುವ ಹಿಜಾಬ್- ಕೇಸರಿ ಶಾಲು ವಿವಾದ ಮುಂದುವರಿದಿದೆ.
ಕುಂದಾಪುರದ ಜೂನಿಯರ್ ಕಾಲೇಜು ನಲ್ಲಿ ಹಿಜಾಬ್ ಧರಿಸಿದ ವಿದ್ಯಾರ್ಥಿನಿಗಳಿಗೆ ಪ್ರವೇಶ ನಿರಾಕರಣೆ ಮಾಡಿದ ಕಾರಣಕ್ಕಾಗಿ ಶಾಲೆಗೆ ಪೋಷಕರು ಮುತ್ತಿಗೆ ಹಾಕಿದ ಘಟನೆ ಶುಕ್ರವಾರ ನಡೆದಿದೆ.
ಹಿಜಾಬ್ ಗೆ ಪ್ರತಿಯಾಗಿ ಸುಮಾರು 300 ಕ್ಕೂ ಅಧಿಕ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದಿದ್ದಾರೆ. ನಂತರ ಶಾಲು ತೆಗೆದು ತರಗತಿಗೆ ಪ್ರವೇಶ ಮಾಡಿದರು.




