February 2, 2026

ದೇವಾಲಯಕ್ಕೆ ರಸ್ತೆ ನಿರ್ಮಾಣ ಮಾಡಲು ಭೂಮಿದಾನ ಮಾಡಿ ಧಾರ್ಮಿಕ ಸಾಮರಸ್ಯದ ಸಂದೇಶವನ್ನು ಸಾರಿದ ಮುಸ್ಲಿಮರು

0
image_editor_output_image-935655642-1644036244692.jpg

ಮಲ್ಲಪ್ಪುರಂ: 500 ವರ್ಷಗಳಷ್ಚು ಹಿಂದಿನ ದೇವಾಲಯಕ್ಕೆ ರಸ್ತೆ ನಿರ್ಮಾಣ ಮಾಡಲು ಇಬ್ಬರು ಮುಸ್ಲಿಮರು ಭೂಮಿ ದಾನ ನೀಡುವ ಮೂಲಕ ಧಾರ್ಮಿಕ ಸಾಮರಸ್ಯದ ಸಂದೇಶವನ್ನು ಸಾರಿದ್ದಾರೆ.

ಕೂಡಿಲಂಗಡಿ ಕಡುಂಗೂತ್ ಮಹಾದೇವ ದೇವಸ್ಥಾನಕ್ಕೆ 10 ಅಡಿ ಅಗಲದ 60 ಮೀಟರ್ ರಸ್ತೆಯನ್ನು ನಿರ್ಮಿಸಲು ಕೂಡಿಲಂಗಡಿ ಪಂಚಾಯಿತಿ ನಿವಾಸಿಗಳಾದ ಸಿ ಎಚ್ ಅಬೂಬಕರ್ ಹಾಜಿ ಮತ್ತು ಎಂ ಉಸ್ಮಾನ್ ಅವರು ನಾಲ್ಕು ಸೆಂಟ್ಸ್ ಜಾಗವನ್ನು ಪಂಚಾಯಿತಿಗೆ ಹಸ್ತಾಂತರಿಸಿದ್ದಾರೆ. ಪಂಚಾಯಿತಿ ಹಾಗೂ ಶಾಸಕರ ನಿಧಿ ಬಳಸಿ ಶೀಘ್ರವೇ ರಸ್ತೆ ನಿರ್ಮಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಸ್ತೆ ಸಮಸ್ಯೆಯನ್ನು ಮುಂದಿಟ್ಟುಕೊಂಡು ಕೆಲವರು ಸಮಾಜದಲ್ಲಿ ಬಿರುಕು ಮೂಡಿಸಲು ಪ್ರಯತ್ನಿಸುತ್ತಿದ್ದಾರೆ. ”ದೇವಸ್ಥಾನಕ್ಕೆ ಸರಿಯಾದ ರಸ್ತೆ ಇರಲಿಲ್ಲ. ಈ ಸಂಬಂಧ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷದ ಪ್ರಚಾರವನ್ನೂ ನಡೆಸಿದ್ದರು ಎಂದು ಮಾಜಿ ಪಂಚಾಯತ್ ಸದಸ್ಯ ರಹೂಫ್ ಕೂಟ್ಟಿಲಂಗಡಿ ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!