ಹಿಜಾಬ್ ವಿವಾದವು ರಾಜಕಾರಣಕ್ಕೆ ಒಂದು ಅಸ್ತ್ರವಾಗಿದೆ: ವಾಟಾಳ್ ನಾಗರಾಜ್
ಮೈಸೂರು: ಹಿಜಾಬ್ ವಿವಾದವು ರಾಜಕಾರಣಕ್ಕೆ ಒಂದು ಅಸ್ತ್ರವಾಗಿದೆ. ಇದು ಸರಿಯಲ್ಲ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ.
ಹಿಜಾಬ್ ವಿವಾದದ ಕುರಿತಂತೆ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಹಿಜಾಬ್ ವಿಚಾರದಲ್ಲಿ ರಾಜಕಾರಣ ಸರಿಯಲ್ಲ. ಮಕ್ಕಳಿಗೆ ಯಾವುದೇ ರಾಜಕೀಯ ಇಲ್ಲ, ಧರ್ಮ ಇಲ್ಲ. ಪ್ರಸ್ತುತ ಬೆಳವಣಿಗೆ ತೀಟೆ ಜಗಳ ಎಂದು ಕಿಡಿಕಾರಿದರು. ಹೊಸದಾಗಿ ಹಿಜಾಬ್ ಧರಿಸಿ ಮಕ್ಕಳು ಶಾಲೆಗೆ ಬರುತ್ತಿಲ್ಲ. ಆದರೆ ಕೇಸರಿ ಶಾಲು ಯಾವಾಗಿನಿಂದ ಬಂತು ಎಂದು ಪ್ರಶ್ನೆ ಮಾಡಿದ್ದಾರೆ.




