ಶಿವಮೊಗ್ಗ: ಕೇಸರಿ ಧ್ವಜ ಹಾರಿಸಿದ್ದ ಧ್ವಂಜಸ್ತಂಭದಲ್ಲಿ ರಾಷ್ಟ್ರ ಧ್ವಜಾರೋಹಣ
ಶಿವಮೊಗ್ಗ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಕೇಸರಿ ಧ್ವಜ ಹಾರಿಸಿದ್ದ ಧ್ವಂಜಸ್ತಂಭದಲ್ಲಿ ಬುಧವಾರ ರಾಷ್ಟ್ರ ಧ್ವಜಾರೋಹಣ ಮಾಡಲಾಯಿತು.
ಹಿಜಾಬ್ – ಕೇಸರಿ ಸಂಘರ್ಷ ನಡುವೆ ಮಂಗಳವಾರ ಧ್ವಂಜಸ್ತಂಭಕ್ಕೆ ಕೇಸರಿ ಬಾವುಟ ಕಟ್ಟಲಾಗಿತ್ತು. ಬುಧವಾರ ಎನ್ಎಸ್ ಯುಐ ಕಾರ್ಯಕರ್ತರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.
ಎನ್ಎಸ್ ಯುಐ ಕಾರ್ಯಕರ್ತರು ಹಿಜಾಬ್ – ಕೇಸರಿ ವಿಚಾರ ಬಿಟ್ಟು ವಿದ್ಯಾರ್ಥಿಗಳು ತರಗತಿಗೆ ಹಾಜರಾಗಬೇಕು. ಶಾಂತಿ ಸುವ್ಯವಸ್ಥೆ ಕಾಪಾಡಬೇಕೆಂದು ಮನವಿ ಮಾಡಿದರು.




