February 2, 2026

ಕೇರಳದ ಮಲಂಬುಳ ಬೆಟ್ಟದ ಬಂಡೆಕಲ್ಲಿನ ನಡುವೆ ಸಿಲುಕಿದ್ದ ಯುವಕನ ರಕ್ಷಣೆ

0
image_editor_output_image-126904877-1644388498939.jpg

ಪಾಲಕ್ಕಾಡ್: ಕೇರಳದ ಮಲಂಬುಳ ಪರ್ವತಗಳ ಕಡಿದಾದ ಬೆಟ್ಟದ ಬಂಡೆಕಲ್ಲಿನ ನಡುವೆ ಸಿಲುಕಿದ್ದ ಯುವಕನನ್ನು ಸತತ ಕಾರ್ಯಾಚರಣೆಯ ಬಳಿಕ ಭಾರತೀಯ ಸೇನೆಯು ಬುಧವಾರ ರಕ್ಷಿಸುವಲ್ಲಿ ಯಶಸ್ವಿಯಾಗಿದೆ.

ಮಲಂಬುಳದ 23 ವರ್ಷದ ಬಾಬು ಎಂಬ ಯುವಕ, ಸೋಮವಾರ (ಫೆ.8) ಮೂವರು ಸ್ನೇಹಿತರ ಜೊತೆಗೆ ಚಾರಣಕ್ಕೆ ತೆರಳಿದ್ದನು. ಬಳಿಕ ಕಾಲು ಜಾರಿ ಕಡಿದಾದ ಬೆಟ್ಟದ ನಡುವೆ ಸಿಲುಕಿದ್ದನು.

ಸುಮಾರು 1,000 ಮೀಟರ್ ಎತ್ತರದ ಬೆಟ್ಟ ಇದಾಗಿದೆ. ಕಳೆದೆರಡು ದಿನಗಳಿಂದ ನೀರು, ಆಹಾರ ಇಲ್ಲದೆ ಸಂಕಷ್ಟಕ್ಕೊಳಗಾಗಿದ್ದನು.

Leave a Reply

Your email address will not be published. Required fields are marked *

error: Content is protected !!