ಬಾವಿಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯ ಮೃತದೇಹ ಪತ್ತೆ
ತಿರುವನಂತಪುರಂ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೋರ್ವಳ ಮೃತದೇಹ ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ತಿರುವನಂತಪುರಂನಲ್ಲಿ ನಡೆದಿದೆ.
ಇರಿಂಜಲಕುಡ ನಿವಾಸಿ ಶಾಂತವನ(19) ಮೃತದೇಹ ಬಾವಿಯಲ್ಲಿ ಪತ್ತೆಯಾಗಿದೆ. ಕೊಡುಂಗಲ್ಲೂರಿನ ಕೆಕೆಟಿಎಂ ಕಾಲೇಜಿನ ವಿದ್ಯಾರ್ಥಿನಿ ಈಕೆ
ಸ್ಥಳೀಯರು ಬಾವಿಯಲ್ಲಿ ಶವ ನೋಡಿ ಪೊಲೀಸರಿಗೆ ಮಾಹಿತಿ ನೀಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಬಾವಿಯಿಂದ ಶಾಂತವನ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ. ನಂತರ ಮರಣೋತ್ತರ ಪರೀಕ್ಷೆಗೆ ತರರಿಸ್ಸೂರ್ ಮೆಡಿಕಲ್ ಕಾಲೇಜಿಗೆ ರವಾನಿಸಿದ್ದಾರೆ.
ಘಟನೆಗೆ ಕಾರಣ ನಿಗೂಢವಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.




