ಕರ್ತವ್ಯ ನಿರ್ವಹಿಸುತ್ತಿದ್ದ ಅರೆವೈದ್ಯಕೀಯ ವಿದ್ಯಾರ್ಥಿ ಮೃತ್ಯು
ಮಂಗಳೂರು: ಕರ್ತವ್ಯ ನಿರ್ವಹಿಸುತ್ತಿದ್ದ ಅರೆವೈದ್ಯಕೀಯ ವಿದ್ಯಾರ್ಥಿಯೊಬ್ಬ ವಿಶ್ರಾಂತಿ ವೇಳೆ ನಿದ್ರಿಸುತ್ತಿದ್ದಾಗ ಅಲ್ಲೇ ಮೃತಪಟ್ಟ ದಾರುಣ ಘಟನೆ ವರದಿಯಾಗಿದೆ.
ಮೃತರನ್ನು ಉಪ್ಪಿನಂಗಡಿ ನಿವಾಸಿ , ನಾಗೇಶ್(23) ಎಂದು ಗುರುತಿಸಲಾಗಿದೆ.
ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ಅರೆವೈದ್ಯಕೀಯ ಇಂಟರ್ ವಿದ್ಯಾರ್ಥಿಯಾಗಿದ್ದು , ಫೆ.13 ರ ರಾತ್ರಿ ಕೆ.ಎಸ್.ಹೆಗಡೆ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು, ಆಸ್ಪತ್ರೆಯ ವಿಶ್ರಾಂತಿ ಕೊಠಡಿಯಲ್ಲಿ ಮಲಗಿದ್ದಾಗ ಸಾವನ್ನಪ್ಪಿದ್ದಾರೆ.
ಇವರ ಸಾವಿಗೆ ಹೃದಯಾಘಾತದಿಂದ ನಾಗೇಶ್ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ.




