ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ವಿರುದ್ಧ ಪ್ರಕರಣ ದಾಖಲು
ಹೈದರಾಬಾದ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಶರ್ಮಾ ವಿರುದ್ಧ ಭಾರತೀಯ ದಂಡಸಂಹಿತೆಯ (ಐಪಿಸಿ) ಸೆಕ್ಷನ್ 504, 505 (2)ರ ಅನ್ವಯ ಹೈದರಾಬಾದ್ನಲ್ಲಿ ಪ್ರಕರಣ ದಾಖಲಿಸಲಾಗಿದೆ. ಟಿಪಿಸಿಸಿ ಅಧ್ಯಕ್ಷ, ಸಂಸದ ಮಲ್ಕಾಜ್ಗಿರಿ ಎ ರೇವಂತ್ ರೆಡ್ಡಿ ನೀಡಿದ ದೂರಿನ ಆಧಾರದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ‘ಎಎನ್ಐ’ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.




