ನನ್ನ ಜೀವಕ್ಕೆ ಬೆದರಿಕೆ ಇದೆ ರಕ್ಷಣೆ ಕೊಡಿ: ಬಿ.ಕೆ ಹರಿ ಪ್ರಸಾದ್
ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ನನ್ನ ವಿರುದ್ಧ ಅವರ ಪಕ್ಷದ ಕಾರ್ಯಕರ್ತರನ್ನು ಪ್ರಚೋದಿಸಿದ್ದಾರೆ. ಇದರಿಂದಾಗಿ ನನ್ನ ಜೀವಕ್ಕೆ ಬೆದರಿಕೆ ಇದೆ’ ಎಂದು ವಿರೋಧ ಪಕ್ಷದ ನಾಯಕ ಬಿ.ಕೆ ಹರಿ ಪ್ರಸಾದ್ ಆರೋಪಿಸಿದ್ದಾರೆ.
ಬಿಜೆಪಿ ಸದಸ್ಯರಿಂದ ನಮಗೆ ಜೀವ ಬೆದರಿಕೆ ಇದೆ, ರಕ್ಷಣೆ ಕೊಡಿ ಎಂದು ಸಭಾಪತಿಗೆ ವಿಧಾನ ಪರಿಷತ್ಗೆ ಕಾಂಗ್ರೆಸ್ ಪಕ್ಷದ ಪರಿಷತ್ ಸದಸ್ಯರು ಪತ್ರ ಬರೆದಿದ್ದಾರೆ. ಬಿ.ಕೆ.ಹರಿಪ್ರಸಾದ್, ಪ್ರಕಾಶ್ ರಾಥೋಡ್, ಸಲೀಂ ಅಹ್ಮದ್ ಪತ್ರಕ್ಕೆ ಸಹಿ ಹಾಕಿದ್ದಾರೆ.




