ಆಂಧ್ರ ಪ್ರದೇಶ ಸರ್ಕಾರದ ಕೈಗಾರಿಕ ಸಚಿವ ಮೇಕಪತಿ ಗೌತಮರೆಡ್ಡಿ ನಿಧನ
ವಿಜಯವಾಡ: ಆಂಧ್ರ ಪ್ರದೇಶ ಸರ್ಕಾರದ ಕೈಗಾರಿಕ ಸಚಿವ ಮೇಕಪತಿ ಗೌತಮರೆಡ್ಡಿ (50) ಸೋಮವಾರ ನಿಧನರಾಗಿದ್ದಾರೆ.
ಗೌತಮ್ ರೆಡ್ಡಿ ನೆಲ್ಲೂರು ಜಿಲ್ಲೆಯಿಂದ ಎರಡನೇ ಬಾರಿ ಶಾಸಕರಾಗಿದ್ದ ಅವರು, ಒಂದು ವಾರದ ಹಿಂದಷ್ಟೇ ದುಬೈ ಎಕ್ಸ್ಪೋದಲ್ಲಿ ಪಾಲ್ಗೊಂಡು ವಿವಿಧ ಕಂಪನಿಗಳ ಜೊತೆ ಆಂಧ್ರಪ್ರದೇಶದಲ್ಲಿ ಹೂಡಿಕೆ ಮಾಡುವ ಒಪ್ಪಂದ ಮಾಡಿಕೊಂಡಿದ್ದರು, ಫೆಬ್ರವರಿ 20ರಂದು ದುಬೈಯಿಂದ ಹೈದರಾಬಾದ್ಗೆ ಬಂದಿದ್ದರು.
ಮಾಜಿ ಸಂಸದ ಮೇಕಪತಿ ರಾಜಮೋಹನ್ ರೆಡ್ಡಿ ಅವರ ಪುತ್ರರಾದ ಗೌತಮ್ ರೆಡ್ಡಿ ನೆಲ್ಲೂರು ಜಿಲ್ಲೆಯ ಆತ್ಮಾಕೂರು ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು.




