ಬೈಕ್ ಸ್ಕಿಡ್: ಮದುವೆಗೆ ತೆರಳಿದ್ದ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು
ಕೋಲಾರ: ಬೈಕ್ ನಿಯಂತ್ರಣ ತಪ್ಪಿ ಆದ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವಪ್ಪಿರುವ ಘಟನೆ ಜಿಲ್ಲೆಯ ಮಾಲೂರು ತಾಲ್ಲೂಕಿನಲ್ಲಿ ಜರುಗಿದೆ.
ಮಾಲೂರು ತಾಲೂಕು ವೆಂಕಟರಾಜನಹಳ್ಳಿ ಗ್ರಾಮದ ಬಳಿ ಘಟನೆ ಈ ಘಟನೆ ನಡೆದಿದ್ದು, ವೆಂಕಟರಾಜನಹಳ್ಳಿ ಗ್ರಾಮದ ಗಂಗಾಧರ್ ಮತ್ತು ಮುರಳಿ ಮೃತರು ಎಂದು ಗುರುತಿಸಲಾಗಿದೆ.
ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳವಾರ ರಾತ್ರಿ ಮದುವೆ ಮುಗಿಸಿಕೊಂಡು ಬರುವಾಗ ಬೈಕ್ ನಿಯಂತ್ರಣ ತಪ್ಪಿ ಬಿದ್ದು ಈ ಅಪಘಾತ ನಡೆದಿದೆ.




