ಉಳ್ಳಾಲ ದರ್ಗಾ, ಚರ್ಚ್, ದೈವಸ್ಥಾನಕ್ಕೆ ಭೇಟಿ ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ
ಮಂಗಳೂರು: ಉಳ್ಳಾಲದ ಐತಿಹಾಸಿಕ ಸ್ಯೆಯ್ಯದ್ ಮದನಿ ದರ್ಗಾ ಉರುಸ್ ಕಾರ್ಯಕ್ರಮಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನಿನ್ನೆ ಭೇಟಿ ನೀಡಿದರು.
ಇದಕ್ಕೂ ಮೊದಲು ತೊಕ್ಕಟ್ಟುವಿನಲ್ಲಿರುವ ಸಂತ ಸೆಬಾಸ್ಟಿಯನ್ ಚರ್ಚ್ ಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಜೊತೆಗೆ ಶ್ರೀ ಬಬ್ಬು ಸ್ವಾಮಿ ದೈವಸ್ಥಾನ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಈ ವೇಳೆ ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕ ಯು.ಟಿ. ಖಾದರ್, ಮಾಜಿ ಸಚಿವರಾದ ರಮಾನಾಥ ರೈ, ಅಭಯಚಂದ್ರ ಜೈನ್ ಮತ್ತಿತರರು ಈ ವೇಳೆ ಇದ್ದರು.




