ಮೇಕೆದಾಟು ಯೋಜನೆಗೆ ಸಿಎಂ 1,000 ಕೋಟಿ ರೂ. ಅನುದಾನ ಘೋಷಣೆ
ಬೆಂಗಳೂರು: ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ರಾಜ್ಯ ಬಜೆಟ್ ಮಂಡಿಸುತ್ತಿರುವ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡಿದ್ದಾರೆ.
ಪ್ರಮುಖವಾಗಿ ಪ್ರತಿಪಕ್ಷ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆದಿದ್ದ ಮೇಕೆದಾಟು ಯೋಜನೆಗೆ ಸಿಎಂ 1000 ಕೋಟಿ ರೂ ಅನುದಾನ ಘೋಷಣೆ ಮಾಡಿದ್ದಾರೆ.
ಕೃಷ್ಣಾ ಮೇಲ್ದಂಡೆ 3ನೇ ಹಂತಕ್ಕೆ 5 ಸಾವಿರ ಕೋಟಿ ರೂಪಾಯಿ, ಕಳಸಾ ಬಂಡೂರಿ ಯೋಜನೆಗೆ 1 ಸಾವಿರ ಕೋಟಿ ರೂಪಾಯಿ, ಎತ್ತಿನಹೊಳೆ ಯೋಜನೆಯ ಎರಡನೇ ಹಂತದ ಕಾಮಗಾರಿಗೆ 3 ಸಾವಿರ ಕೋಟಿ ರೂ ಅನುದಾನವನ್ನು ಸಿಎಂ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ.




