March 22, 2026

ತೆರಿಗೆ ದರದಲ್ಲಿ ಹೆಚ್ಚಳ‌ ಇಲ್ಲ: ಸಿಎಂ ಘೋಷಣೆ

0
Screenshot_2022-03-04-13-47-26-67_680d03679600f7af0b4c700c6b270fe7.jpg

ಬೆಂಗಳೂರು: ವಿಧಾನಸಭೆಯಲ್ಲಿ 2022–23ನೇ ಸಾಲಿನ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೆರಿಗೆ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಕೋವಿಡ್‌ನಿಂದ ಸಂಕಷ್ಟಕ್ಕೆ ಸಿಲುಕಿದ್ದ ರಾಜ್ಯದ ಆರ್ಥಿಕತೆ ಸುಧಾರಣೆಯ ಹಾದಿಯಲ್ಲಿ ಸಾಗುತ್ತಿದೆ. ಜನಸಾಮಾನ್ಯರ ಮೇಲೆ ಹೆಚ್ಚಿನ ಹೊರೆ ಹಾಕಲು ಬಯಸುವುದಿಲ್ಲ. ಹೀಗಾಗಿ ಯಾವುದೇ ತೆರಿಗೆ ದರವನ್ನು ಏರಿಕೆ ಮಾಡುವುದಿಲ್ಲ. ಬದಲಿಗೆ, ತೆರಿಗೆ ಸಂಗ್ರಹ ಇಲಾಖೆಗಳ ದಕ್ಷತೆ ಹೆಚ್ಚಿಸಿ, ಸಂಪನ್ಮೂಲ ಸಂಗ್ರಹದ ಗುರಿ ಸಾಧನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!