ಮಾರ್ಚ್ 12 ರಂದು ಬೆಳ್ತಂಗಡಿ ಕಥೋಲಿಕ್ ಕ್ರೆಡಿಟ್ ಸಹಕಾರ ಸಂಘದ ಬೆಳ್ಳಿ ಹಬ್ಬದ ಉದ್ಘಾಟನಾ ಸಮಾರಂಭ
ಬೆಳ್ತಂಗಡಿ: ಬೆಳ್ತಂಗಡಿ ಕಥೋಲಿಕ್ ಕ್ರೆಡಿಟ್ ಸಹಕಾರ ಸಂಘದ ಬೆಳ್ಳಿ ಹಬ್ಬದ ಉದ್ಘಾಟನಾ ಸಮಾರಂಭ ಮಾರ್ಚ್ 12ರ ಶನಿವಾರ ಬೆಳ್ತಂಗಡಿಯ ಸಿ.ವಿ.ಸಿ ಹಾಲ್ ನಲ್ಲಿ ನಡೆಯಲಿದೆ.
ಮಡಂತ್ಯಾರು ಸೇಕ್ರೆಡ್ ಹಾರ್ಟ್ ಚರ್ಚ್ ನ ಪ್ರಧಾನ ಧರ್ಮಗುರು ಫಾ. ಬೆಸಿಲ್ ವಾಸ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಬೆಳ್ತಂಗಡಿ ಕಥೋಲಿಕ್ ಕ್ರೆಡಿಟ್ ಸಹಕಾರ ಸಂಘದ ಅಧ್ಯಕ್ಷ, ವಕೀಲ ಎಲೋಸಿಯಸ್ ಎಸ್ ಲೋಬೊ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಕಥೋಲಿಕ್ ಕ್ರೆಡಿಟ್ ಸಹಕಾರ ಸಂಘದ ಮುಖ್ಯ ಪ್ರವರ್ತಕ ಫ್ರಾಂಕಿ ಡಿ ಸೋಜ, ಪುತ್ತೂರು ಸಹಕಾರ ಸಂಘಗಳ ಸಹಾಯಕ ನಿಬಂಧಕಿ ಸುಕನ್ಯ ರಾವ್, ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಭಗೀರಥ ಜಿ, ದ.ಕ ಇಮಾಮ್ ಕೌನ್ಸಿಲ್ ನ ಪ್ರಧಾನ ಕಾರ್ಯದರ್ಶಿ ಮೌಲನಾ ಮೊಹಮ್ಮದ್ ಹಾರೀಸ್ ಹನೀಫಿ ಭಾಗವಹಿಸಲಿದ್ದಾರೆ.
ಬೆಳ್ತಂಗಡಿ ಕಥೋಲಿಕ್ ಕ್ರೆಡಿಟ್ ಸಹಕಾರ ಸಂಘದ ಉಪಾಧ್ಯಕ್ಷ ಜೋನ್ ಅರ್ವಿನ್ ಡಿ ಸೋಜ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಐವನ್ ಗೊನ್ಸಾಲ್ವಿಸ್, ನಿರ್ದೇಶಕರಾದ ಅಲ್ಫೋನ್ಸ್ ಫ್ರಾಂಕೋ, ರುಡೋಲ್ಸ್ ಡಿಸೋಜ, ಜೊಸೆಪಿನ್ ಪಿಂಟೋ, ಲಾರೆನ್ಸ್ ಡೇಸಾ, ಜೊಕಿಂ ಕ್ರಾಸ್ತಾ, ಆಗ್ನೇಸ್ ಜುಲಿಯಾನ ಬರ್ಬೋಜ, ಲಾರೆನ್ಸ್ ಡಿ ಸೋಜ, ವಿನ್ಸೆಂಟ್ ರೊಡ್ರಿಗಸ್ ಉಪಸ್ಥಿತರಿರಲಿದ್ದಾರೆ.