ಹೊಟ್ಟೆನೋವು ತಾಳಲಾರದೆ ಮಹಿಳೆ ಕೆರೆಗೆ ಹಾರಿ ಆತ್ಮಹತ್ಯೆ
ಮಧುಗಿರಿ: ಹೊಟ್ಟೆನೋವು ತಾಳಲಾರದೆ ಮಹಿಳೆಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ದೊಡ್ಡೇರಿ ಹೋಬಳಿ ಲಕ್ಷೀಪುರ ಗೊಲ್ಲರಹಟ್ಟಿಯಲ್ಲಿ ನಡೆದಿದೆ.
ಮಂಜುಳಾ ಮೃತ ಮಹಿಳೆ ಎಂದು ತಿಳಿದು ಬಂದಿದೆ. ಸುಮಾರು ತಿಂಗಳಿಂದ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಇದರಿಂದ ಬೇಸತ್ತ ಅವರು ನೋವು ಸಹಿಸಲಾರದೆ, ಗ್ರಾಮದ ಕೆರೆಯೊಂದಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.




