ಗುರುವಾಯನಕೆರೆಯಲ್ಲಿ ಮೀನುಗಳ ಮಾರಣಹೋಮ
ಬೆಳ್ತಂಗಡಿ: ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆಯಲ್ಲಿ ಮೀನುಗಳ ಮಾರಣಹೋಮವಾಗಿರುವುದು ವರದಿಯಾಗಿದೆ.
ಸುಮಾರು ಮೂರು ಎಕ್ರೆಗೂ ಅಧಿಕವಿರುವ ಗುರುವಯ್ಯನ ಕೆರೆ ಎಂದೇ ಪ್ರಸಿದ್ಧವಾಗಿರುವ ಗುರುವಾಯನಕೆರೆಯಲ್ಲಿ ವಿಷ ಪ್ರಾಶನ ಅಥವಾ ಕೆಮಿಕಲ್ ರಿಯಾಕ್ಷನ್ ಆಗಿರುವ ಸಾಧ್ಯತೆ ಕುರಿತು ಅನುಮಾನ ವ್ಯಕ್ತವಾಗಿದೆ.
ಕಳೆದ ಒಂದೆರಡು ವಾರಗಳಿಂದ ಕೆರೆ ನೀರಿನ ಬಣ್ಣ ಬದಲಾಗಿರುವ ಕುರಿತು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದರು. ಆದರೆ ಇದೀಗ ನಿನ್ನೆಯಿಂದ ಸಣ್ಣಪುಟ್ಟ ಮೀನುಗಳು ಕೆರೆ ದಡದಲ್ಲಿ ಪ್ರಾಣಕಳೆದುಕೊಂಡು ತೇಲಾಡುತ್ತಿವೆ.




