ಕೋರ್ಟ್ಗೆ ಹೋದ ಆರು ಮಂದಿ ವಿದ್ಯಾರ್ಥಿನಿಯರು ನಾಳೆಯಿಂದಲೇ ತರಗತಿಗೆ ಬರಬೇಕು: ಶಾಸಕ ರಘುಪತಿ ಭಟ್
ಉಡುಪಿ: ಕೋರ್ಟ್ಗೆ ಹೋದ ಆರು ಮಂದಿ ವಿದ್ಯಾರ್ಥಿನಿಯರು ನಾಳೆಯಿಂದಲೇ ತರಗತಿಗೆ ಬರಬೇಕು. ಅವರೆಲ್ಲರಿಗೂ ಸಮವಾದ ಶಿಕ್ಷಣ ನೀಡುತ್ತೇವೆ. ಇಷ್ಟು ದಿನ ಅವರ ಶಿಕ್ಷಣಕ್ಕೆ ಸಮಸ್ಯೆ ಆಗಿದ್ರೆ, ಅವರಿಗೆ ಪ್ರತ್ಯೇಕ ನೋಟ್ಸ್ ನೀಡಲಾಗುತ್ತದೆ ಎಂದು ಶಾಸಕ ರಘುಪತಿ ಭಟ್ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಸತ್ಯಮೇವ ಜಯತೇ’ ಉಚ್ಛ ನ್ಯಾಯಾಲಯದ ತೀರ್ಪಿನ ಮೂಲಕ ಭಾರತದ ಸಂಸ್ಕೃತಿಗೆ ಜಯವಾಗಿದೆ, ಈ ಮಣ್ಣಿನ ವಿರೋಧಿಗಳು ಸೋಲು ಕಂಡಿದ್ದಾರೆ. ಸಮವಸ್ತ್ರದ ಕುರಿತು ಕರ್ನಾಟಕ ಹೈಕೋರ್ಟ್ ಹೊರಡಿಸಿದ ತೀರ್ಪನ್ನು ಅತ್ಯಂತ ಸಂತೋಷದಿಂದ ಸ್ವಾಗತಿಸುತ್ತೇನೆ. ಇದು ನಮ್ಮ ಸಂವಿಧಾನಕ್ಕೆ ಲಭಿಸಿದ ಜಯ. ಮತಾಂಧತೆ ಕೊನೆಯಾಗಲಿ, ಕಾನೂನಿನ ಪಾಲನೆಯಾಗಲಿ ಎಂದಿದ್ದಾರೆ.




