ಚಲಿಸುತ್ತಿದ್ದ ರೈಲು ಹತ್ತುವ ವೇಳೆ ಆಯ ತಪ್ಪಿ ಬಿದ್ದ ಪ್ರಯಾಣಿಕ: ರೈಲ್ವೆ ಪೊಲೀಸ್ ಸಿಬ್ಬಂದಿಯಿಂದ ರಕ್ಷಣೆ
ದಾವಣಗೆರೆ: ಚಲಿಸುತ್ತಿದ್ದ ರೈಲು ಹತ್ತುತ್ತಿದ್ದ ಸಂದರ್ಭದಲ್ಲಿ ಆಯ ತಪ್ಪಿ ಕೆಳಕ್ಕೆ ಬಿದ್ದಂತಹ ಪ್ರಯಾಣಿಕರೊಬ್ಬರನ್ನು ರೈಲ್ವೆ ಪೊಲೀಸ್ ಸಿಬ್ಬಂದಿ ಬಿ.ಆರ್. ನಾಗರಾಜ್ ರಕ್ಷಿಸಿದ ಘಟನೆ ಶನಿವಾರ ದಾವಣಗೆರೆ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.
ಬೆಂಗಳೂರಿನಿಂದ ಧಾರವಾಡಕ್ಕೆ ತೆರಳುತ್ತಿದ್ದ ರೈಲು ಹತ್ತಲು ಪ್ರಯಾಣಿಕರೊಬ್ಬರು ಯತ್ನಿಸಿದ ಸಂದರ್ಭದಲ್ಲಿ ಕೆಳಗೆ ಬಿದ್ದಿದ್ದನ್ನು ಗಮನಿಸಿದ ಸಿಬ್ಬಂದಿ ನಾಗರಾಜ್ ಕೂಡಲೇ ದೌಡಾಯಿಸಿ ಪ್ರಾಣ ರಕ್ಷಿಸಿದರು.




