ಬಂಟ್ವಾಳ: ಭಾರೀ ಮಳೆಗೆ ರಾಜ್ಯ ಹೆದ್ದಾರಿಗೆ ಬೃಹತ್ ಮರ ಬಿದ್ದು ಸಂಚಾರ ಅಸ್ತವ್ಯಸ್ತ
ಬಂಟ್ವಾಳ: ಸುರಿದ ಭಾರೀ ಗಾಳಿ ಮಳೆಯಿಂದಾಗಿ ಮುಂಜಾನೆ ಬೃಹತ್ ಮರ ರಸ್ತೆಗೆ ಮುರಿದು ಬಿದ್ದು ಸಂಚಾರಕ್ಕೆ ಅಡ್ಡಿಯಾದ ಘಟನೆ ಮೂಡುಬಿದಿರೆ ಮುಖ್ಯ ರಸ್ತೆಯ ಸಿದ್ಧಕಟ್ಟೆಯಲ್ಲಿ ನಡೆಯಿತು.
ಸಿದ್ಧಕಟ್ಟೆ ತಿರುವು ರಸ್ತೆಯಿಂದ ಕಲ್ಕುರೀ – ಮಾಡಮ್ಮೆ ಒಳ ರಸ್ತೆಯಲ್ಲಿ ಈ ಘಟನೆ ನಡೆದಿದ್ದು ವಾಹನ ಸಂಚಾರಕ್ಕೆ ತೊಂದರೆಯಾಗಿತ್ತು.
ಸ್ಥಳೀಯರ ಸಹಕಾರದೊಂದಿಗೆ ಮರದ ಕೊಂಬೆಯನ್ನು ತೆರವುಗೊಳಿಸಲಾಯಿತು.
ಸಾರ್ವಜನಿಕರಿಗೆ ಪ್ರತ್ಯೇಕ ಸಂಚಾರ ವ್ಯವಸ್ಥೆ ಮಾಡಲಾಯಿತು.




