ಅಲ್ಲಿಪಾದೆ: ಉರುಳಿಗೆ ಬಿದ್ದ ಚಿರತೆ, ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
ಬಂಟ್ವಾಳ: ಉರುಳಿಗೆ ಬಿದ್ದು ಜೀವನ್ಮರಣ ಹೋರಾಟದಲ್ಲಿದ್ದ ಚಿರತೆಯೊಂದನ್ನು ಅರಣ್ಯ ಇಲಾಖೆಯ ನೇತ್ರತ್ವದಲ್ಲಿ ಸ್ಥಳೀಯರ ಸಹಕಾರದೊಂದಿಗೆ ಅರಣ್ಯಿಇಲಾಖೆಯವರು ರಕ್ಷಿಸಿ ಪಿಲಿಕುಳಕ್ಕೆ ಹಸ್ತಾಂತರ ಮಾಡಲಾಗಿದೆ.
ಅಲ್ಲಿಪಾದೆ ಸಮೀಪದ ದೇವಶ್ಯಪಡೂರು ಗ್ರಾಮದ ಬೀಜಪ್ಪಾಡಿ ಎಂಬಲ್ಲಿ ಕಾಡಿನಲ್ಲಿ ಯಾರೋ ಇಟ್ಟಿದ್ದ ಉರುಳಿಗೆ ಸುಮಾರು 6 ವರ್ಷ ಪ್ರಾಯದ ಗಂಡು ಚಿರತೆಯೊಂದು ಉರುಳಿ ಗೆ ಬಿದ್ದಿರುವುದನ್ನು ಸ್ಥಳೀಯರು ಗಮನಿಸಿ ಅರಣ್ಯ ಇಲಾಖೆಯವರ ಗಮನಕ್ಕೆ ತಂದಿದ್ದರು.
ಕೂಡಲೇ ಸ್ಥಳಕ್ಕೆ ಧಾವಿಸಿದ ವಲಯ ಅರಣ್ಯಾಧಿಕಾರಿ ರಾಜೇಶ್ ಬಳಿಗಾರ್ ನೇತ್ರತ್ವದಲ್ಲಿ ರಾತ್ರಿ ಸುಮಾರು 9 ಗಂಟೆಯಿಂದ ಮುಂಜಾನೆ 4. ಗಂಟೆ ವರೆಗೆ ಕಾರ್ಯಚರಣೆ ನಡೆಸಿ ಚಿರತೆಯನ್ನು ರಕ್ಷಣೆ ಮಾಡಲಾಯಿತು ಎಂದು ಅಧಿಕಾರಿ ತಿಳಿಸಿದ್ದಾರೆ.




