ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ: ಉಪ್ಪಿನಂಗಡಿ ವರ್ತಕರಿಂದ ಡಿವೈಎಸ್ಪಿಗೆ ದೂರು
ಪುತ್ತೂರು: ಉಪ್ಪಿನಂಗಡಿಯಲ್ಲಿ ಮುಸ್ಲಿಮರ ಜೊತೆ ದೈನಂದಿನ ವ್ಯವಹಾರ ಮಾಡುವುದಿಲ್ಲ ಎಂಬ ವಾಟ್ಸಪ್ ಬರಹಕ್ಕೆ ಸಂಬಂಧಿಸಿ ನೊಂದ ವರ್ತಕರು ಪೊಲೀಸ್ ಮೆಟ್ಟಲೇರಿದ್ದಾರೆ.
ಇಂದು ಬೆಳಗ್ಗೆಯಿಂದ ಉಪ್ಪಿನಂಗಡಿ ಪೇಟೆಯ 32 ಅಂಗಡಿಗಳ ಹೆಸರುಗಳಿರುವ ಒಕ್ಕಣೆಯ ಬರಹಗಳು ದಕ್ಷಿಣ ಕನ್ನಡ ಜಿಲ್ಲೆಯ
ಪುತ್ತೂರು ತಾಲೂಕಿನ ಉಪ್ಪಿನಂಗಡಿಯಾದಾದ್ಯಂತ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಉಪ್ಪಿನಂಗಡಿಯ 32 ವರ್ತಕರು ಪುತ್ತೂರು ಡಿವೈಎಸ್ಪಿ ಗಾನಕುಮಾರ್ ಅವರನ್ನು ಭೇಟಿ ಮಾಡಿ ದೂರು ನೀಡಿದ್ದಾರೆ.
ಸಮಾಜದ ಎಲ್ಲಾ ಮಂದಿಯೂ ನಮ್ಮಲ್ಲಿ ಗ್ರಾಹಕರಾಗಿದ್ದು, ವ್ಯಾಪಾರಿ ಧರ್ಮ ಪರಿಪಾಲನೆಯೊಂದಿಗೆ ವ್ಯವಹಾರ ನಡೆಸಿಕೊಂಡು ಬರುತ್ತಿದ್ದೇವೆ.
ನಮ್ಮ ವ್ಯಾಪಾರ ಮಳಿಗೆಯ ಹೆಸರನ್ನು ಬಳಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡಿ ಮತೀಯ ಸಂಘರ್ಷವನ್ನು ಮೂಡಿಸಲೆತ್ನಿಸಿದ ದುರ್ಷರ್ಮಿಯನ್ನು ಪತ್ತೆ ಹಚ್ಚುವಂತೆ ಮನವಿ ಮಾಡಲಾಗಿದೆ.
ಮುಸ್ಲಿಂಮರ ಜೊತೆ ವ್ಯವಹಾರ ನಡೆಸಲ್ಲ: 32 ಅಂಗಡಿಗಳ ಹೆಸರಿರುವ ವಾಟ್ಸಪ್ ಸಂದೇಶ ವೈರಲ್




