ಕೊಡಗು ವಿರಾಜಪೇಟೆಯಲ್ಲಿ ಹುಲಿ ದಾಳಿಗೆ ಯುವಕ ಬಲಿ
ವಿರಾಜಪೇಟೆ: ತೋಟವೊಂದರಲ್ಲಿ ಕಾಳು ಮೆಣಸು ಕುಯ್ಯಲು ಬಂದ ಕಾರ್ಮಿಕನ ಮೇಲೆ ಹುಲಿ ದಾಳಿ ನಡೆಸಿ ಹತ್ಯೆ ಮಾಡಿದ ಘಟನೆ ವಿರಾಜಪೇಟೆ ತಾಲ್ಲೂಕಿನ ಮೊದಲ ರುದ್ರಗುಪ್ಪೆ ಗ್ರಾಮದಲ್ಲಿ ನಡೆದಿದೆ.
ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬಿಟ್ಟಾಂಗಲ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಂಡಂಗಾಲ ಒಂದನೇ ರುದ್ರಗುಪ್ಪೆ ಕೊಂಗಂಡ ಗಣಪತಿ ಅಯ್ಯಪ್ಪ ಎಂಬುವವರ ಕಾಫಿ ತೊಟದ ಕಾರ್ಮಿಕ ಗಣೇಶ್ ಪುಟ್ಟು (29) ಹುಲಿ ದಾಳಿಗೆ ಬಲಿಯಾದ ವ್ಯಕ್ತಿ ಎಂದು ತಿಳಿದುಬಂದಿದೆ.
ವಿರಾಜಪೇಟೆ ತಾಲ್ಲೂಕಿನ ಕಂಡಂಗಾಲ ರುದ್ರಗುಪ್ಪೆ ಕುಂದ ಭಾಗದಲ್ಲಿ ಕೆಲವು ತಿಂಗಳಿನಿಂದ ಜಾನುವಾರುಗಳ ಮೇಲೆ ಹುಲಿ ದಾಳಿ ನಡೆದಿರುವ ಘಟನೆಯು ಮಾಸುವ ಮುನ್ನವೇ ಹುಲಿ ದಾಳಿಗೆ ಕಾರ್ಮಿಕನೊರ್ವನ ಮೇಲೆ ದಾಳಿ ನಡೆದು ಮೃತನಾದ ಘಟನೆ ನಡೆದಿದೆ.
ಈ ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಮೂಡಿದೆ. ಸಂಬಂಧಿಸಿದ ಇಲಾಖೆಯವರು ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.





