ಬೆಳ್ತಂಗಡಿ: ತಂದೆಯ ಹತ್ಯೆ ಪ್ರಕರಣದ ವಿಚಾರಣೆ ಪೂರ್ಣ: ಪುತ್ರನ ಮೇಲಿನ ಆರೋಪ ಸಾಬೀತು
ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ 2021ರಲ್ಲಿ ತಂದೆಯನ್ನು ಹತ್ಯೆ ಮಾಡಿದ ಪ್ರಕರಣದ ವಿಚಾರಣೆ ಮಂಗಳೂರಿನ 4ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆದಿದ್ದು, ಪುತ್ರನ ಮೇಲಿನ ಆರೋಪ ಸಾಬೀತಾಗಿದೆ.
2021ರ ಜ. 18ರಂದು ಬೆಳ್ತಂಗಡಿ ತಾಲೂಕು ಗರ್ಡಾಡಿ ಗ್ರಾಮದ ನಡು ಮುಡ್ಯೊಟ್ಟು ನಿವಾಸಿ ಶ್ರೀಧರ ಪೂಜಾರಿ (56) ಅವರನ್ನು ಪುತ್ರ ಹರೀಶ್ ಪೂಜಾರಿ (28) ಕೊಲೆ ಮಾಡಿದ್ದು, ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.




