March 19, 2026

ಸಮಾಜದಲ್ಲಿ ನಡೆಯುತ್ತಿರುವ ಇತ್ತೀಚಿನ ಬೆಳವಣಿಗೆಗಳಿಗೂ ಬಿಜೆಪಿಗೂ ಸಂಬಂಧವಿಲ್ಲ: ಸಂಸದ ನಳಿನ್ ಕುಮಾರ್ ಕಟೀಲು

0
Screenshot_2022-04-05-11-39-57-58_680d03679600f7af0b4c700c6b270fe7.jpg

ಬೆಂಗಳೂರು: ಸಮಾಜದಲ್ಲಿ ನಡೆಯುತ್ತಿರುವ ಇತ್ತೀಚಿನ ಬೆಳವಣಿಗೆಗಳಿಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಹಲಾಲ್ ಕಟ್ ಮತ್ತು ಜಟ್ಕಾ ಕಟ್ ಮಾಂಸಕ್ಕೆ ಸಂಬಂಧಿಸಿದಂತೆ ಜನರು ತಮ್ಮದೇ ಆದ ನಿಲುವು ಹೊಂದಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ತಮ್ಮ ರಾಜಕೀಯ ಲಾಭಕ್ಕಾಗಿ ಕೆಲವು ಸಮುದಾಯಗಳನ್ನು ಓಲೈಸಲು ಪ್ರಯತ್ನಿಸುತ್ತಿವೆ. ಈ ವಿಚಾರದಲ್ಲಿ ಬಿಜೆಪಿ ಯಾವುದೇ ಸಮುದಾಯವನ್ನು ಬೆಂಬಲಿಸಿಲ್ಲ ಎಂದರು.

ಇನ್ನು ಮಸೀದಿಯಲ್ಲಿ ಹಿಜಾಬ್, ಹಲಾಲ್ ಕಟ್ ಮತ್ತು ಧ್ವನಿ ವರ್ಧಕಗಳಿಗೆ ಸಂಬಂಧಿಸಿದಂತೆ ಡಿ ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಸ್ಪಷ್ಟ ನಿಲುವನ್ನು ಹೊಂದಿಲ್ಲ. ಮೊದಲು ಅವರು ತಮ್ಮ ನಿಲುವು ಸ್ಪಷ್ಟಪಡಿಸಬೇಕು ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!