ಪತ್ರಕರ್ತರೊಬ್ಬರ ಸಮನ್ಸ್ ವಿರುದ್ಧ ಬಾಂಬೆ ಹೈ ಕೋರ್ಟ್ ಮೆಟ್ಟಿಲೇರಿದ ಸಲ್ಮಾನ್ ಖಾನ್
ಮುಂಬಯಿ: ಪತ್ರಕರ್ತರೊಬ್ಬರೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪಕ್ಕೆ ಸಂಬಂಧಿಸಿ ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಮುಂಬೈನ ಸ್ಥಳೀಯ ನ್ಯಾಯಾಲಯವೊಂದು ಸಮನ್ಸ್ ನೀಡಿದ್ದು, ಅದರ ವಿರುದ್ಧ ಸಲ್ಮಾನ್ ಬಾಂಬೆ ಹೈ ಕೋರ್ಟ್ ಮೆಟ್ಟಿಲೇರಿದ್ದಾರೆ.
ಅಶೋಕ್ ಪಾಂಡೆ ಹೆಸರಿನ ಪತ್ರಕರ್ತರು ಸಲ್ಮಾನ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೇರಬೇಕೆಂದು ನ್ಯಾಯಾಲಯದ ಮೆಟ್ಟಿಲೇರಿದ್ದರು.
ಆ ವಿಚಾರವಾಗಿ ಏ.5ರಂದು ವಿಚಾರಣೆಗೆ ಹಾಜರಾಗುವಂತೆ ಸಲ್ಮಾನ್ ಮತ್ತು ಅವರ ಬಾಡಿಗಾರ್ಡ್ಗೆ ನ್ಯಾಯಾಲಯ ಸಮನ್ಸ್ ನೀಡಿತ್ತು. ಆದರೆ ಅದನ್ನು ತೆಗೆದು ಹಾಕಬೇಕು ಎಂದು ನಟ ಹೈ ಕೋರ್ಟ್ನಲ್ಲಿ ಮನವಿ ಮಾಡಿದ್ದಾರೆ.




