ಮಠಗಳಿಗೆ ಸರಕಾರದ ಅನುದಾನ ನೀಡಬೇಡಿ ಎಂದ ವಿಧಾನ ಪರಿಷತ್ ಬಿಜೆಪಿಸದಸ್ಯ
ಮೈಸೂರು: ‘ಸ್ವಾಮೀಜಿಗಳು ಸರ್ಕಾರ ನೀಡಿದ ಅನುದಾನದಿಂದ ಕೆಲಸ ಮಾಡುತ್ತಾರೆ. ಮಠಗಳಿಗೆ ಹಣ ನೀಡುವ ಬದಲು, ಅದನ್ನು ಇತರ ಕಾರ್ಯಗಳಿಗೆ ಮೀಸಲಿಡಬೇಕು’ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಸಲಹೆ ನೀಡಿದರು.
ನಗರದಲ್ಲಿ ಶುಕ್ರವಾರ ಒಡನಾಡಿ ಸಂಸ್ಥೆಯು ಏರ್ಪಡಿಸಿದ್ದ ‘ಪ್ರಸ್ತುತ ವಿದ್ಯಮಾನದಲ್ಲಿ ತೇಜಸ್ವಿ ಚಿಂತನೆ’ ಸಂವಾದದಲ್ಲಿ ಮಾತನಾಡಿದ ಅವರು, ‘ನಗರಕ್ಕೆ ಗುರುವಾರ ಭೇಟಿ ನೀಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಸರ್ಕಾರಗಳು ಮಾಡುವ ಕೆಲಸವನ್ನು ಸ್ವಾಮೀಜಿಗಳು ಮಾಡುತ್ತಾರೆ ಎಂದಿದ್ದರು. ಮುಖ್ಯಮಂತ್ರಿಯಾದವರು ಅಂಥ ಮಾತನ್ನಾಡಬಾರದು’ ಎಂದು ಆಕ್ಷೇಪ ವ್ಯಕ್ತಪಡಿಸಿದರು.




