ನವರಾತ್ರಿ ಪೂಜೆಯ ವೇಳೆ ವಿದ್ಯಾರ್ಥಿ ಗುಂಪಿನ ನಡುವೆ ಗಲಾಟೆ: ಹಲವು ವಿದ್ಯಾರ್ಥಿಗಳಿಗೆ ಗಾಯ
ನವದೆಹಲಿ: ದೆಹಲಿಯ ಜವಾಹರ್ ಲಾಲ್ ನೆಹರು ವಿಶ್ವವಿದ್ಯಾನಿಲಯ ಕ್ಯಾಂಟೀನ್ನಲ್ಲಿ ನವರಾತ್ರಿ ಪೂಜೆಯ ವೇಳೆ ವಿದ್ಯಾರ್ಥಿಗಳ ಗುಂಪಿನ ನಡುವೆ ಸಂಘರ್ಷ ಸಂಭವಿಸಿದ್ದು, ಈ ಗಲಾಟೆಯಲ್ಲಿ ಹಲವು ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ.
ಮೂಲಗಳ ಪ್ರಕಾರ ಮಾಂಸಾಹಾರ ಸೇವಿಸುವ ಮತ್ತು ಬಡಿಸುವ ವಿಚಾರವಾಗಿ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದ್ದು, ವಿಶ್ವವಿದ್ಯಾಲಯದ ಒಳಗೆ ಎಡಪಂಥೀಯ ಮತ್ತು ಎಬಿವಿಪಿ ವಿದ್ಯಾರ್ಥಿ ಸಂಘಟನೆಗಳ ವಿದ್ಯಾರ್ಥಿ ಕಾರ್ಯಕರ್ತರ ನಡುವೆ ಈ ಘರ್ಷಣೆ ನಡೆದಿದೆ ಎನ್ನಲಾಗಿದೆ.
ತಾವು ಮಾಂಸಾಹಾರ ತಿನ್ನುವುದಕ್ಕೆ ಎಬಿವಿಪಿ ವಿದ್ಯಾರ್ಥಿಗಳು ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಆರೋಪಿಸಿದೆ.
ಎಡಪಂಥೀಯ ಸಂಘಟನೆಗಳು ರಾಮನವಮಿ ಪ್ರಯುಕ್ತ ಹಾಸ್ಟೆಲ್ ನಲ್ಲಿ ಪೂಜೆ ನಡೆಸುವುದಕ್ಕೆ ವಿರೋಧ ವ್ಯಕ್ತಪಡಿಸಿವೆ. ಈ ವೇಳೆ ಘರ್ಷಣೆ ನಡೆದಿದ್ದು, ಈ ವೇಳೆ ಹಲವರಿಗೆ ಗಾಯಗಳಾಗಿವೆ. ಈ ಕುರಿತಂತೆ ಜೆಎನ್ಯು ಆಡಳಿತ ಮತ್ತು ಸ್ಥಳೀಯ ಪೊಲೀಸರಿಗೆ ದೂರು ನೀಡಿದ್ದು, ವಿಶ್ವವಿದ್ಯಾನಿಲಯ ಆಡಳಿತ ಈ ಬಗ್ಗೆ ತನಿಖೆ ಆರಂಭಿಸಿದೆ.