ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ: ಸಚಿವ ಈಶ್ವರಪ್ಪ, ಆಪ್ತರಾದ ಬಸವರಾಜ, ರಮೇಶ್ ವಿರುದ್ಧ ಎಫ್ಐಆರ್ ದಾಖಲು
ಉಡುಪಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಚಿವ ಈಶ್ವರಪ್ಪ ಮತ್ತು ಆಪ್ತರಾದ ಬಸವರಾಜ, ರಮೇಶ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ ಎಂದು ವರದಿ ತಿಳಿಸಿದೆ.
ಮೃತರ ಸಂಬಂಧಿ ಬೆಳಗಾವಿಯ ಪ್ರಶಾಂತ ಗೌಡಪ್ಪ ಪಾಟೀಲ್ ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಬುಧವಾರ ಪ್ರಕರಣ ದಾಖಲು ಮಾಡಲಾಗಿದೆ.
ಬೆಳಗಾವಿ ಮೂಲದ ಗುತ್ತಿಗೆದಾರ ಮತ್ತು ಬಿಜೆಪಿ ಕಾರ್ಯಕರ್ತ ಸಂತೋಷ್ ಪಾಟೀಲ್ ಉಡುಪಿಯಲ್ಲಿ ಮಂಗಳವಾರ ನಿಗೂಢವಾಗಿ ಸಾವನ್ನಪ್ಪಿದ್ದರು.




