March 24, 2026

ಮಂಗಳೂರು: ಅಪಘಾತ ತಂದ ದುರಂತ-ಪತಿಯ ಸಾವಿನ ಸುದ್ದಿ ಕೇಳಿ ಮಗುವನ್ನು ಕೊಂದು ಸಾವಿಗೆ ಶರಣಾದ ಪತ್ನಿ

0
IMG_20220417_112007.jpg

ಮಂಗಳೂರು: ರಸ್ತೆ ದಾಟುವಾಗ ಬೆಂಗಳೂರಿನಿಂದ ಕುಂದಾಪುರಕ್ಕೆ ಹೋಗುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ
ಅಗ್ನಿಶಾಮಕ ಇಲಾಖೆ ಚಾಲಕರೋರ್ವರು ಮೃತಪಟ್ಟ ಘಟನೆ ಮಂಗಳೂರು ನಗರದ ಕುಂಟಿಕಾನ ಬಳಿ ನಿನ್ನೆ ರಾತ್ರಿ ನಡೆದಿದೆ.

ಗಂಗಾಧರ ಬಿ. ಕಮ್ಮಾರ (36 ವರ್ಷ) ಮೃತಪಟ್ಟ ದುರ್ದೈವಿಯಾಗಿದ್ದಾರೆ.

ಗಂಗಾಧರ ಅವರು ಮೃತಪಟ್ಟ ಘಟನೆ ನಡೆದಾಗ ಅವರ ಪತ್ನಿ ತನ್ನ ತಮ್ಮನ ಮನೆಯಲ್ಲಿದ್ದರು. ಈ ಸುದ್ದಿ ತಿಳಿದ ಕೂಡಲೇ ಶೃತಿ (30) ಕೂಡ ಮಗ ಅಭಿರಾಮನನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಗಂಗಾಧರ ಅವರು ಮಂಗಳೂರಿನಲ್ಲಿ ಚಾಲಕರಾಗಿ ಕಾರ್ಯ ನಿರ್ವಹಿಸುತ್ತಿದ್ದು ಮಂಗಳೂರು ಸಂಚಾರ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!