April 1, 2025

ಮಂಗಳೂರು: ಎರಡು ತಂಡಗಳ ನಡುವೆ ಮಾರಾಮಾರಿ:
ಮಹಿಳಾ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ, ಏಳು ಆರೋಪಿಗಳ ಬಂಧನ

0

ಮಂಗಳೂರು: ನಗರದ ಬಳ್ಳಾಲ್ ಬಾಗ್ ಪ್ರದೇಶದಲ್ಲಿ ಶನಿವಾರ ತಡರಾತ್ರಿ ಎರಡು ತಂಡಗಳ ಮಧ್ಯೆ ನಡೆದ ಮಾರಾಮಾರಿ ನಡೆದಿದ್ದು, ಮಧ್ಯೆ ಪ್ರವೇಶಿದ ಮಹಿಳಾ ಪೊಲೀಸ್ ಅಧಿಕಾರಿಯನ್ನು ತಳ್ಳಿ, ವಾಕಿಟಾಕಿ ಕಿತ್ತೆಸೆದ ಘಟನೆ ನಡೆದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಧೀರಜ್ ಶೆಟ್ಟಿ, ರಕ್ಷಿತ್ ಕೆ., ರೋಹಿತ್ ಶೆಟ್ಟಿ, ಹರ್ಷಿತ್, ಕೀರ್ತಿರಾಜ್, ವಿವೇಕ್, ರಾಹುಲ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

ನಿನ್ನೆ ತಡರಾತ್ರಿ 11.45ರ ಸುಮಾರಿಗೆ ಎರಡು ತಂಡಗಳ ಮಧ್ಯೆ ಬಳ್ಳಾಲ್ ಬಾಗ್ ಬಳಿ ರಸ್ತೆಯಲ್ಲಿಯೇ ಮಾರಕಾಯುಧಗಳನ್ನು ಹಿಡಿದು ಮಾರಾಮಾರಿ ನಡೆದಿತ್ತು. ತಕ್ಷಣ ಸ್ಥಳಕ್ಕೆ ಬರ್ಕೆ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಅಧಿಕಾರಿ ಧಾವಿಸಿ ಹೊಡೆದಾಟ ನಡೆಸಿರುವ ತಂಡವನ್ನು ಸಮಾಧಾನ ಮಾಡಲೆತ್ನಿಸಿದ್ದಾರೆ. ಈ ಸಂದರ್ಭ ಆರೋಪಿ ಧೀರಜ್ ಎಂಬಾತ ಸಮಾಧಾನ ಮಾಡಲೆತ್ನಿಸಿರುವ ಮಹಿಳಾ ಪೊಲೀಸ್ ಅಧಿಕಾರಿಯನ್ನೇ ತಳ್ಳಿ, ಅವರ ಕೈಯ್ಯಲ್ಲಿದ್ದ ವಾಕಿಟಾಕಿಯನ್ನು ಕಿತ್ತೆಸೆದಿದ್ದಾನೆ. ಜೊತೆಗೆ ಉಳಿದ ಆರೋಪಿಗಳು ಅವರು ಮುಂದೆ ಹೋಗದಂತೆ ತಡೆದಿದ್ದಾರೆ ಎಂದು ಪೊಲೀಸ್ ಅಧಿಕಾರಿ ದೂರಿನಲ್ಲಿ ತಿಳಿಸಿದ್ದಾರೆ.

 

 

ಈ ಸಂದರ್ಭ ಹೆಚ್ಚಿನ ಪೊಲೀಸರು ಬರುತ್ತಿದ್ದಂತೆ ಕೆಲ ಆರೋಪಿಗಳು ಅಲ್ಲಿಂದ ಪರಾರಿಯಾಗಿದ್ದಾರೆ. ಪೊಲೀಸರು ಸ್ಥಳದಲ್ಲಿದ್ದ ಏಳು ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!