March 19, 2026

ಪುತ್ತೂರು: ಕಾಲೇಜು ವಿದ್ಯಾರ್ಥಿ, ಹಿಂದು ಜಾಗರಣ ವೇದಿಕೆ ಸದಸ್ಯ ಬಾವಿಗೆ ಬಿದ್ದು ಮೃತ್ಯು

0
IMG-20220423-WA0000.jpg

ಪುತ್ತೂರು: ಪುತ್ತೂರು ಸರಕಾರಿ ಕಾಲೇಜಿನ ವಿದ್ಯಾರ್ಥಿಯೊಬ್ಬರು ಸುಳ್ಯಪದವು ಮನೆಯ ಸಮೀಪದ ತೋಟದ ಬಾವಿಗೆ ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ಘಟನೆ ಎ.22ರಂದು ತಡ ರಾತ್ರಿ ಬೆಳಕಿಗೆ ಬಂದಿದೆ.

ಸುಳ್ಯಪದವು ನಿವಾಸಿ ಪುತ್ತೂರು ಸರಕಾರಿ ಕಾಲೇಜಿನ ವಿದ್ಯಾರ್ಥಿ ಧನುಷ್ ಮೃತಪಟ್ಟವರು. ಅವರು ರಾತ್ರಿ ಮನೆಯ ತೋಟಕ್ಕೆ ಹೋದ ಸಂದರ್ಭ ತೋಟದ ಬಾವಿಗೆ ಅಕಸ್ಮಿಕವಾಗಿ ಬಿದ್ದಿದ್ದಾರೆ. ಧನುಷ್ ಅವರು ಹಿಂದೂ ಜಾಗರಣ ವೇದಿಕೆಯ ಸಕ್ರಿಯ ಕಾರ್ಯಕರ್ತರಾಗಿದ್ದರು. ಕೆಲ ದಿನಗಳ ಹಿಂದಷ್ಟೇ ನಡೆದ ಹಿಂದೂ ಜಾಗರಣ ವೇದಿಕೆ ಸುಳ್ಯಪದವು ಘಟಕದಲ್ಲಿ ಪದಾಧಿಕಾರಿಯಾಗಿ ಆಯ್ಕೆಯಾಗಿದ್ದರು. ಮೃತರು ತಂದೆ ತಿಮ್ಮಪ್ಪ ಗೌಡ, ತಾಯಿ ಯಮುನಾ, ಸಹೋದರ ಭವಿತ್, ಬಂಧು ಮಿತ್ರರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!