September 8, 2024

ಮೂಡಬಿದ್ರೆ: ಭೂಗತ ಪಾತಕಿಗಳ ಜತೆ ನಂಟು ಆರೋಪ:
ಆರೋಪಿಯ ಬಂಧನ

0

ಮಂಗಳೂರು: ಕ್ರಿಮಿನಲ್ ಪ್ರಕರಣಯೊಂದರಲ್ಲಿ ಬಾಂಬೆ ಪೊಲೀಸರಿಗೆ ಬೇಕಾಗಿದ್ದು, ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮೂಡಬಿದ್ರೆ ಪೊಲೀಸ್ ಠಾಣೆ ಸರಹದ್ದಿನ ಕೊಟೆಬಾಗಿಲು ನಿವಾಸಿ ಪ್ರವೀಣ್ ಕುಮಾರ್(46) ಬಂಧಿತ ಆರೋಪಿ.

ಈತ ಭೂಗತ ಪಾತಕಿಗಳೊಂದಿಗೆ ನಂಟು ಹೊಂದಿರುವ ಹಾಗೂ ತನ್ನೊಂದಿಗೆ ಮಾರಕಾಸ್ತ್ರಗಳನ್ನು ಇಟ್ಟುಕೊಂಡಿರುವ ಸಾಧ್ಯತೆಗಳು ಇರುವ ಬಗ್ಗೆ ಮಾಹಿತಿ ಇದ್ದ ಮೆರೆಗೆ ತನ್ನ ಮನೆಗೆ ಬಂದಿರುವ ಮಾಹಿತಿ ಬಂದ ಮೇರೆಗೆ, ಆತನನ್ನು ವಿಚಾರಣೆಗಾಗಿ ಠಾಣೆಗೆ ಕರೆತರುವ ಸಲುವಾಗಿ ಇಬ್ಬರು ಸಿಬ್ಬಂದಿಗಳನ್ನು ತೆರಳಿದ್ದರು.

ಪೊಲೀಸ್ ಸಿಬ್ಬಂದಿಗಳು ಆರೋಪಿಯ ಮನೆಯ ಬಳಿ ಹೋದಾಗ ಸಮವಸ್ತ್ರದಲ್ಲಿದ್ದ ಸಿಬ್ಬಂದಿಗಳನ್ನು ನೋಡಿ ಪರಾರಿಯಾಗಲು ಯತ್ನಿಸಿದ್ದು, ಆತನನ್ನು ಹಿಡಿಯಲು ಹೋದಾಗ ಆರೋಪಿಯು ಜೋರಾಗಿ ಕೈ ಯಿಂದ ತಳ್ಳಿ ನೆಲಕ್ಕೆ ಬೀಳಿಸಿ ಗಾಯಗೊಳಿಸಿದ್ದಾನೆ. ನಂತರ ಸಿಬ್ಬಂದಿಗಳು ಆತನನ್ನು ಬೆನ್ನಟ್ಟಿ ಹಿಡಿದು ಠಾಣೆಗೆ ಕರೆತಂದಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಆತನ ಮೇಲೆ ಪ್ರಕರಣವನ್ನು ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!