ಲಾಲು ಪ್ರಸಾದ್ ಯಾದವ್ ಪುತ್ರ ಆರ್ ಜೆಡಿ ಪಕ್ಷಕ್ಕೆ ರಾಜೀನಾಮೆ
ಪಾಟ್ನಾ: ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಆರ್ ಜೆಡಿ ವರಿಷ್ಠ ಲಾಲು ಪ್ರಸಾದ್ ಯಾದವ್ ಅವರ ಹಿರಿಯ ಪುತ್ರ ತೇಜ್ ಪ್ರತಾಪ್ ಯಾದವ್ ಅವರು ಪಕ್ಷಕ್ಕೆ ರಾಜೀನಾಮೆ ನೀಡುವುದಾಗಿ ಸೋಮವಾರ ಘೋಷಿಸಿದ್ದಾರೆ.
“ನನ್ನ ತಂದೆಯೊಂದಿಗೆ ಇಂದು ಸಭೆ ನಡೆಸಿದ ನಂತರ ನಾನು ಆರ್ಜೆಡಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ. ನಾನು ಯಾವಾಗಲೂ ನನ್ನ ತಂದೆಯ ಆದರ್ಶಗಳನ್ನು ಅನುಸರಿಸಲು ಪ್ರಯತ್ನಿಸುತ್ತೇನೆ ಮತ್ತು ಪಕ್ಷದ ಕಾರ್ಯಕರ್ತರನ್ನು ಗೌರವಿಸುತ್ತೇನೆ ಎಂದು ಆರೋಪದಿಂದ ನೊಂದ ತೇಜ್ ಪ್ರತಾಪ್ ಯಾದವ್ ಅವರು ಟ್ವೀಟ್ ಮಾಡಿದ್ದಾರೆ.




