March 19, 2026

ಕಾಲುವೆಯಲ್ಲಿ ಆಟವಾಡಲು ಹೋಗಿದ್ದ ವೇಳೆ ಇಬ್ಬರು ಬಾಲಕಿಯರು ನೀರಿಗೆ ಜಾರಿಬಿದ್ದು ಮೃತ್ಯು

0
Screenshot_20220426-104334_Chrome.jpg

ರಾಯಚೂರು: ಕಾಲುವೆಯಲ್ಲಿ ಆಟವಾಡಲು ಹೋಗಿದ್ದ ವೇಳೆ ಇಬ್ಬರು ಬಾಲಕಿಯರು ನೀರಿಗೆ ಜಾರಿಬಿದ್ದು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಮಿರ್ಜಾಪುರ ಗ್ರಾಮದಲ್ಲಿ ಸಂಭವಿಸಿದೆ.

8 ನೇ ತರಗತಿ ವಿದ್ಯಾರ್ಥಿನಿ ಇಂದು(14), ಏಳನೇ ತರಗತಿ ಓದುತ್ತಿದ್ದ ಸುಜಾತ(13) ಮೃತ ಬಾಲಕಿಯರು.

ಈ ಇಬ್ಬರು ಬಾಲಕಿಯರು ಗ್ರಾಮದಲ್ಲಿ ಬಳಿ ಹಾದು ಹೋಗಿರುವ ಕಾಲುವೆಯಲ್ಲಿ ಆಟವಾಡಲು ತೆರಳಿದ್ದ ವೇಳೆ ಕಾಲು ಜಾರಿ ಬಿದ್ದಿದ್ದು, ಈ ವೇಳೆ ಈಜಲು ಬಾರದೆ ಇಬ್ಬರೂ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಇಡಪಾನೂರು ಪೊಲೀಸರು ಆಗಮಿಸಿ ಪರಿಶೀಲಿಸಿದ್ದಾರೆ. ನೀರಲ್ಲಿ ಬಿದ್ದ ಬಾಲಕಿಯರ ಮೃತ ದೇಹಗಳನ್ನು ಹೊರತೆಗೆಯಲಾಗಿದೆ. ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

Leave a Reply

Your email address will not be published. Required fields are marked *

error: Content is protected !!