December 15, 2025

ಯುವ ಇಂಜಿನಿಯರ್ ತಮ್ಮ ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ

0
image_editor_output_image-1865812288-1651186796032.jpg

ಹರಪನಹಳ್ಳಿ: ಬೆಂಗಳೂರಿನ ಖಾಸಗಿ ಕಂಪನಿವೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವ ಇಂಜಿನಿಯರ್ ಒಬ್ಬ ಗುರುವಾರ ಮಧ್ಯಾಹ್ನ ಪಟ್ಟಣದ ತಮ್ಮ ನಿವಾಸದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಪ್ರಜ್ವಲ್ (23) ಆತ್ಮಹತ್ಯೆ ಮಾಡಿಕೊಂಡ ಯುವಕ, ಪಟ್ಟಣದ ಎಡಿಬಿ ಪ್ರಥಮ ದರ್ಜೆ ಕಾಲೇಜಿನ ಹಿರಿಯ ಪ್ರಾಧ್ಯಾಪಕ ಜಿ.ಉಮೇಶ ಅವರ ಕಿರಿಯ ಪುತ್ರ ಪ್ರಜ್ವಲ್ ಇವರು ಇಂಜಿನಿಯರಿಂಗ್ ಮುಗಿಸಿಕೊಂಡು ಬೆಂಗಳೂರಿನ ಅಮೇಜಾನ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದನು.

ಕಳೆದ ನಾಲ್ಕು ದಿನಗಳ ಹಿಂದಷ್ಟೆ ಹರಪನಹಳ್ಳಿ ಪಟ್ಟಣದ ಆಚಾರ್ಯ ಬಡಾವಣೆಯಲ್ಲಿರುವ ತಮ್ಮ ನಿವಾಸಕ್ಕೆ ಆಗಮಿಸಿದ್ದನು. ಏ.28 ರ ರಾತ್ರಿ ಪುನಃ ಬೆಂಗಳೂರಿಗೆ ಹೋಗುತ್ತಿದ್ದರು ಎನ್ನಲಾಗಿದೆ,

ಗುರುವಾರ ಬೆಳಿಗ್ಗೆ ಮನೆಯಲ್ಲಿ ಉಪಹಾರ ಸೇವಿಸಿ ಮಹಡಿಯಲ್ಲಿ ತನ್ನ ಕೊಠಡಿಗೆ ತೆರಳಿದ್ದ ಪ್ರಜ್ವಲ್ ಮಧ್ಯಾಹ್ನ ಮೂರು ಗಂಟೆಯಾದರೂ ಊಟಕ್ಕೆ ಬಾರದೆ ಇದ್ದುದರಿಂದ ಪೋಷಕರು ಹೋಗಿ ನೋಡಿದಾಗ ಪ್ಯಾನಿಗೆ ನೇಣು ಹಾಕಿಕೊಂಡಿರುವುದು ಗೊತ್ತಾಗಿದೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಪಟ್ಟಣದ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!