January 31, 2026

ಖಾಲಿಸ್ತಾನ ವಿರೋಧಿ ಮೆರವಣಿಗೆ ವೇಳೆ ಘರ್ಷಣೆ: ಮೂವರು ಪೊಲೀಸ್‌ ಅಧಿಕಾರಿಗಳನ್ನು ದಿಢೀರ್‌ ವರ್ಗಾವಣೆ

0
image_editor_output_image-1560259950-1651299251893.jpg

ಚಂಡೀಗಡ: ಖಾಲಿಸ್ತಾನ ವಿರೋಧಿ ಮೆರವಣಿಗೆಗೆ ಸಂಬಂಧಿಸಿದಂತೆ ನಡೆದ ಘರ್ಷಣೆ ಹಿನ್ನೆಲೆಯಲ್ಲಿ ಪಂಜಾಬ್‌ನ ಪಟಿಯಾಲ ಉದ್ವಿಗ್ನಗೊಂಡಿದ್ದು, ಶನಿವಾರ ಮೂವರು ಪೊಲೀಸ್‌ ಅಧಿಕಾರಿಗಳನ್ನು ದಿಢೀರ್‌ ವರ್ಗಾವಣೆ ಮಾಡಲಾಗಿದೆ. ಜತೆಗೆ, ಮೊಬೈಲ್‌ ಸಂಪರ್ಕ ಸೇವೆಯನ್ನು ಶನಿವಾರ ಕಡಿತಗೊಳಿಸಲಾಗಿದೆ.

ಪಟಿಯಾಲ ವಲಯ ಐಜಿಪಿ ಸೇರಿದಂತೆ ಮೂವರು ಪೊಲೀಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು, ಮುಖ್ಯಮಂತ್ರಿ ಭಗವಂತ ಮಾನ್‌ ಅವರ ಕಚೇರಿಯಿಂದ ಆದೇಶ ಹೊರಬಿದ್ದಿದೆ.

ಮುಖವಿಂದರ್ ಸಿಂಗ್ ಚಿನ್ನಾ ಅವರನ್ನು ಪಟಿಯಾಲ ವಲಯದ ಹೊಸ ಐಜಿ ಆಗಿ ನೇಮಿಸಲಾಗಿದೆ. ದೀಪಕ್ ಪಾರಿಕ್ ಅವರು ಪಟಿಯಾಲದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿಯಾಗಲಿದ್ದಾರೆ. ವಜೀರ್ ಸಿಂಗ್ ಅವರನ್ನು ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಿಸಲಾಗಿದೆ.

ಖಾಲಿಸ್ತಾನ ವಿರೋಧಿ ಮೆರವಣಿಗೆಗೆ ಸಂಬಂಧಿಸಿದಂತೆ ಪಟಿಯಾಲದಲ್ಲಿ ಶುಕ್ರವಾರ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿತ್ತು. ಎರಡೂ ಗುಂಪುಗಳು ಪರಸ್ಪರ ಕಲ್ಲು ತೂರಾಟ ನಡೆಸಿದ್ದವು. ಈ ವೇಳೆ ನಾಲ್ವರು ಗಾಯಗೊಂಡಿದ್ದರು. ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದರು.

ಗೃಹ ಇಲಾಖೆಯ ಆದೇಶದ ಮೇರೆಗೆ ಪಟಿಯಾಲದಲ್ಲಿ ಪೊಲೀಸರನ್ನು ಭಾರಿ ಸಂಖ್ಯೆಯಲ್ಲಿ ನಿಯೋಜಿಸಲಾಗಿದ್ದು, ಭದ್ರತೆ ಬಿಗಿಗೊಳಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!