December 16, 2025

ಜನತಾ ಜಲಧಾರೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಬಸ್ ಪಲ್ಟಿ: ಓರ್ವ ಸಾವು, ಮೂವರಿಗೆ ಗಾಯ

0
image_editor_output_image-757664906-1651359943198.jpg

ಕುಣಿಗಲ್: ಜನತಾ ಜಲಧಾರೆ ಕಾರ್ಯಕ್ರಮಕ್ಕೆ ಜನರನ್ನು ಕರೆ ತರುತ್ತಿದ್ದ ಖಾಸಗಿ ಬಸ್ ಮತ್ತು ಆಟೋ ರಿಕ್ಷಾ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಕುಣಿಗಲ್‌ನಲ್ಲಿ ನಡೆದಿದೆ.

ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಗೌಡಗೆರೆ ಗ್ರಾಮದ ರಾಮಯ್ಯ (55) ಮೃತಪಟ್ಟವರು. ಅವರೊಂದಿಗೆ ಪ್ರಯಾಣಿಸುತ್ತಿದ್ದ ಸುರೇಶ್, ಪ್ರೀತಮ್, ಮನೀಶ್ ಗಾಯಗೊಂಡಿದ್ದಾರೆ. ಇವರೆಲ್ಲರೂ ಉಂಗುರ ಗ್ರಾಮದ ದೇವಸ್ಥಾನಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ.

ಕುಣಿಗಲ್ ತಾಲೂಕಿನ ಅಮೃತೂರು ಹೋಬಳಿ ಬೆನವಾರ ಕೊಪ್ಪಲು ಗ್ರಾಮದ ಬಳಿ ಅಪಘಾತ ಸಂಭವಿದಿದ್ದು, ಪಟ್ಟಣದ ಜಿಕೆಬಿಎಂಎಸ್ ಶಾಲಾ ಅವರಣದಲ್ಲಿ ಜೆಡಿಎಸ್ ಪಕ್ಷ ಹಮ್ಮಿಕೊಂಡಿದ್ದ ಜನತಾ ಜಲಧಾರೆ ಕಾರ್ಯಕ್ರಮಕ್ಕೆ ಬಸ್ ಜನರನ್ನು ಕರೆತರುತ್ತಿತ್ತು.

ಈ ವೇಳೆ ಬೆನವಾರ ಕೊಪ್ಪಲು ತಿರುವಿನ ಬಳಿ ಬರುತ್ತಿದ್ದ ಅಟೋರಿಕ್ಷಾಕ್ಕೆ ಡಿಕ್ಕಿ ಹೊಡಿದಿದೆ. ಚಾಲಕನ ನಿಯಂತ್ರಣ ತಪ್ಪಿ ಬಸ್ ಉರುಳಿ ಬಿದ್ದಿದೆ.

Leave a Reply

Your email address will not be published. Required fields are marked *

error: Content is protected !!