September 20, 2024

ಬೆಳ್ತಂಗಡಿ: ಕಾರು ಢಿಕ್ಕಿ, ಬೈಕ್‌ನಲ್ಲಿದ್ದ ದಂಪತಿ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

0

ಬೆಳ್ತಂಗಡಿ: ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್‌ನಲ್ಲಿದ್ದ ದಂಪತಿ ಗಂಭೀರವಾಗಿ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಕುಲಾಲ ಮಂದಿರದ ಬಳಿ ಶನಿವಾರ ಸಂಜೆ ನಡೆದಿದೆ.

ಗಾಯಾಳುಗಳನ್ನು ಎಸ್‌ಡಿಎಂ ಕಾಲೇಜು ಪ್ರಾಧ್ಯಾಪಕ ರವಿಶಂಕರ್ ಹಾಗೂ ಅವರ ಪತ್ನಿ ಎಂದು ಗುರುತಿಸಲಾಗಿದೆ.

ರವಿಶಂಕರ್‍ ತಮ್ಮ ಪತ್ನಿಯೊಂದಿಗೆ ಉಜಿರೆಯಿಂದ ಪುತ್ತೂರು ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಪುತ್ತೂರಿನಿಂದ ಬರುತ್ತಿದ್ದ ಕಾರು ಕುಲಾಲ ಮಂದಿರದ ಬಳಿ ರವಿಶಂಕರ್‍ ಅವರ ಬೈಕ್‌ಗೆ ಢಿಕ್ಕಿ ಹೊಡೆದಿದೆ.

ಢಿಕ್ಕಿಯ ರಭಸಕ್ಕೆ ರವಿಶಂಕರ್ ಅವರ ಕಾಲಿಗೆ ಬಲವಾದ ಪೆಟ್ಟಾಗಿದ್ದು, ಪತ್ನಿಗೂ ಗಾಯಗಳಾಗಿವೆ. ಹೆಚ್ಚಿನ ಚಿಕಿತ್ಸೆಗಾಗಿ ಗಾಯಾಳುಗಳನ್ನು ಮಂಗಳೂರಿನ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!