March 20, 2026

ಮಂಗಳೂರು: ನಕಲಿ ದಾಖಲೆ ಸೃಷ್ಟಿಸಿ ಜಾಗ ಮಾರಾಟ, ಇಬ್ಬರು ಆರೋಪಿಗಳ ಬಂಧನ

0
image_editor_output_image-635622207-1651900368663.jpg

ಮಂಗಳೂರು: ನಕಲಿ ದಾಖಲೆ ಸೃಷ್ಟಿಸಿ ,ವಯೋವೃದ್ಧರೋರ್ವರ ಜಾಗ ಮಾರಾಟಕ್ಕೆ ಸಂಬಂಧಿಸಿ ಸುಮಾರು 60 ಲ.ರೂ.ಗೂ ಅಧಿಕ ವಂಚನೆ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಉಡುಪಿಯ ಅಶೋಕ ಕುಮಾರ್‌(47) ಮತ್ತು ರೇಷ್ಮಾ ವಾಸುದೇವ್‌ ನಾಯಕ್‌ (36)ರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು ಮೂಲದ, ಪ್ರಸ್ತುತ ಬಜ್ಪೆ ಬಳಿ ವಾಸವಿರುವ ಕ್ರಿಸ್ಟಿನ್‌ ಎಡ್ವಿನ್‌ ಜೋಸೆಫ್ ಗೋನ್ಸಾಲ್ವಿಸ್‌ (84) ವಂಚನೆಗೊಳಗಾದವರು. ಅವರು ಉಡುಪಿ ಜಿಲ್ಲೆಯ ಮೂಡುತೋನ್ಸೆ ಗ್ರಾಮದಲ್ಲಿ 77 ಸೆಂಟ್ಸ್‌ ಜಾಗ ಹೊಂದಿದ್ದು ಅದನ್ನು ಮಾರಾಟ ಮಾಡಲು ಬಯಸಿದ್ದರು. ಹೀಗಾಗಿ ತಮ್ಮ ಪರಿಚಯದ ರಾಮ ಪೂಜಾರಿ ಎಂಬವರಿಗೆ ಹೇಳಿದ್ದರು

ಅಶೋಕ್‌ ಕುಮಾರ್‌ ಮತ್ತು ರೇಷ್ಮಾ ನಾಯಕ್‌ ಜಾಗ ಖರೀದಿಸಲು ಆಸಕ್ತಿ ಹೊಂದಿರುವ ಬಗ್ಗೆ ರಾಮ ಪೂಜಾರಿ ತಿಳಿಸಿದ್ದರು. ಆ ಬಳಿಕ ಇದಕ್ಕಾಗಿ ಕರಾರು ಪತ್ರ ಮಾಡಲಾಗಿತ್ತು.

ಆ ಸಂದರ್ಭ ಮುಂಗಡವಾಗಿ ಚೆಕ್‌ ಮೂಲಕ 30 ಲ.ರೂ.ಗಳನ್ನು ನೀಡಿದ್ದು ಉಳಿದ ಹಣವನ್ನು 6 ತಿಂಗಳೊಳಗೆ ನೀಡಿ ಕ್ರಯಪತ್ರ ರಿಜಿಸ್ಟರ್‌ ಮಾಡಿಕೊಳ್ಳುವುದಾಗಿ ತಿಳಿಸಿದ್ದರು.

ಅನಂತರ ಖರೀದಿದಾರರು ಹಣದ ಕೊರತೆ ಇರುವುದರಿಂದ ಮೊದಲು 40 ಸೆಂಟ್ಸ್‌ ನೋಂದಣಿ ಮಾಡಿಸಿ ಹಣ ನೀಡಿ, ಉಳಿದ 37 ಸೆಂಟ್ಸ್‌ ಅನಂತರ ನೋಂದಣಿ ಮಾಡಿಕೊಳ್ಳುವುದಾಗಿ ತಿಳಿಸಿದ್ದರು.

ಆದರೆ ಅವರು ವಂಚಿಸಿ ಎಲ್ಲ 77 ಸೆಂಟ್ಸ್‌ಗೆ ಕ್ರಯಪತ್ರ ಮಾಡಿಸಿದ್ದರು. ಅದಕ್ಕೆ ಪೂರಕವಾಗಿ ವಿವಿಧ ದಾಖಲೆಪತ್ರಗಳನ್ನು ನಕಲಿಯಾಗಿ ಮಾಡಿರುವುದು ಗೊತ್ತಾಗಿದೆ.

Leave a Reply

Your email address will not be published. Required fields are marked *

error: Content is protected !!