ವಿಟ್ಲ: ಬುದ್ದಿವಾದ ಹೇಳಿದ್ದಕ್ಕೆ ಮನನೊಂದು ಬಾಲಕ ಆತ್ಮಹತ್ಯೆ
ವಿಟ್ಲ: ಅಪ್ರಾಪ್ತ ಬಾಲಕನಿಗೆ ಪೋಷಕರು ಬುದ್ದಿವಾದ ಹೇಳಿದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಪುಚ್ಚೆಗುತ್ತು ಎಂಬಲ್ಲಿ ನಡೆದಿದೆ.
ಪುಚ್ಚೆಗುತ್ತು ಜೋಗಿಬೆಟ್ಟು ವಾಮನ ಪೂಜಾರಿ ರವರ ಪುತ್ರ ಉಜ್ವಲ್ (14) ಮೃತಪಟ್ಟ ಬಾಲಕ.
ಉಜ್ವಲ್ ವಿಟ್ಲ ಮಾದರಿ ಶಾಲೆಯ ವಿದ್ಯಾರ್ಥಿ ಎನ್ನಲಾಗಿದೆ. ಪೋಷಕರು ಟಿವಿ ನೋಡಿದಕ್ಕೆ ಬುದ್ದಿವಾದ ಹೇಳಿದ್ದಾರೆ. ಇದರಿಂದ ನೊಂದ ಬಾಲಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.




