February 1, 2026

ಬಂಟ್ವಾಳ: ಕೆಎಎಸ್ ಅಧಿಕಾರಿ ಡಾ| ಸ್ಮಿತಾ ರಾಮು ಬಂಟ್ವಾಳ ತಹಶೀಲ್ದಾರ್ ಆಗಿ ನೇಮಕ

0
image_editor_output_image-2023228160-1652413433221

ಬಂಟ್ವಾಳ: ಮಂಡ್ಯ ಜಿಲ್ಲೆಯ ಚುನಾವಣಾ ಶಾಖೆಯ ತಹಶೀಲ್ದಾರ್, 2015ನೇ ಬ್ಯಾಚ್‌ನ ಕೆಎಎಸ್ ಅಧಿಕಾರಿ ಡಾ| ಸ್ಮಿತಾ ರಾಮು ಅವರನ್ನು ಬಂಟ್ವಾಳ ತಹಶೀಲ್ದಾರ್ ಆಗಿ ನಿಯೋಜಿಸಿ ರಾಜ್ಯ ಸರಕಾರ ಆದೇಶ ನೀಡಿದೆ.


ಈ ಹಿಂದೆ ರಶ್ಮಿ ಎಸ್.ಆರ್.ಅವರು ಬಂಟ್ವಾಳ ತಹಶೀಲ್ದಾರ್ ಆಗಿದ್ದು, ಅವರನ್ನು ಹಿಂದುಳಿದ ವರ್ಗಗಳ ಇಲಾಖೆಯ ಜಿಲ್ಲಾ ಅಧಿಕಾರಿಯಾಗಿ ವರ್ಗಾವಣೆ ಮಾಡಿದ ಬಳಿಕ ಬಂಟ್ವಾಳ ತಹಶೀಲ್ದಾರ್ ಹುದ್ದೆ ಖಾಲಿಯಾಗಿತ್ತು. ಡಾ| ಸ್ಮಿತಾ ಅವರು ಮೂಲದಲ್ಲಿ ದಂತ ವೈದ್ಯೆಯಾಗಿದ್ದಾರೆ.


ಮಂಗಳೂರಿನ ಏನಪೋಯ ದಂತ ವೈದ್ಯಕೀಯ ಕಾಲೇಜಿನಲ್ಲಿ ಬಿಡಿಎಸ್ ಪದವಿ ಪಡೆದಿರುವ ಅವರು ಬಳಿಕ ಸುಮಾರು 14 ವರ್ಷಗಳ ಕಾಲ ಮಂಡ್ಯ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ ನಲ್ಲಿ ವೈದ್ಯೆಯಾಗಿ ಕರ್ತವ್ಯ ನಿರ್ವಹಿಸಿದ್ದರು

Leave a Reply

Your email address will not be published. Required fields are marked *

error: Content is protected !!