February 3, 2026

ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದ ಮಗು ಸ್ಮಶಾನದಲ್ಲಿ ಅಂತ್ಯಸಂಸ್ಕಾರದ ವೇಳೆ ಜೀವಂತ

0
Screenshot_2022-05-16-13-36-33-92_680d03679600f7af0b4c700c6b270fe7.jpg

ಸಿಂಧನೂರು: ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದ ಮಗು ಸ್ಮಶಾನದಲ್ಲಿ ಅಂತ್ಯಸಂಸ್ಕಾರದ ವೇಳೆ ಜೀವಂತವಾಗಿರುವ ಘಟನೆಯೊಂದು ರಾಯಚೂರು ಜಿಲ್ಲೆಯ ತುರ್ವಿಹಾಳ ಪಟ್ಟಣದಲ್ಲಿ ಕಂಡು ಬಂದಿದೆ.

ಮೇ 7 ರಂದು ತುರ್ವಿಹಾಳದ ಸರ್ಕಾರಿ ಆಸ್ಪತ್ರೆಯಲ್ಲಿ ಈರಪ್ಪ ಅವರ ಪತ್ನಿ ಅಮರಮ್ಮ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ನವಜಾತ ಶಿಶು ರಕ್ತಹೀನತೆಯಿಂದ ಬಳಲುತ್ತಿತ್ತು. ಆಸ್ಪತ್ರೆಯಲ್ಲಿ ಸೌಲಭ್ಯದ ಕೊರತೆಯಿರುವ ಹಿನ್ನೆಲೆಯಲ್ಲಿ ವೈದ್ಯರು ದಂಪತಿಗೆ ಮಗುವನ್ನು ಸಿಂಧನೂರು ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವಂತೆ ಸಲಹೆ ನೀಡಿದ್ದರು.

ಆದರೆ ದಂಪತಿ ಮೇ 10ರಂದು ನವಜಾತ ಶಿಶುವನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಮೇ 14ರವರೆಗೆ (ಶನಿವಾರ) ಮಗುವಿಗೆ ಚಿಕಿತ್ಸೆ ನೀಡಿದ ಬಳಿಕ ವೈದ್ಯರು ಮಗು ಮೃತಪಟ್ಟಿರುವುದಾಗಿ ತಿಳಿಸಿದ್ದರು.

Leave a Reply

Your email address will not be published. Required fields are marked *

error: Content is protected !!