ಚಾರ್ ಧಾಮ್ ಯಾತ್ರೆಯಲ್ಲಿ 39 ಮಂದಿ ಯಾತ್ರಾರ್ಥಿಗಳು ಸಾವು
ಡೆಹರಾಡೂನ್: ಉತ್ತರಾಖಂಡದಲ್ಲಿ ಈ ವರ್ಷದ ಚಾರ್ ಧಾಮ್ ಯಾತ್ರೆ ಕೈಗೊಂಡಿರುವ ಯಾತ್ರಾರ್ಥಿಗಳ ಪೈಕಿ ಈವರೆಗೆ 39 ಮಂದಿ ಮೃತಪಟ್ಟಿದ್ದಾರೆ.
ದೈಹಿಕವಾಗಿ ಸದೃಢವಾಗಿಲ್ಲದಿದ್ದರೆ ಯಾತ್ರೆಗೆ ಬರಬೇಡಿ ಎಂದು ಅಲ್ಲಿನ ಸರ್ಕಾರ ಭಕ್ತಾದಿಗಳಿಗೆ ಸೂಚಿಸಿರುವುದಾಗಿ ಎಎನ್ಐ ಟ್ವೀಟ್ ಮಾಡಿದೆ.
ಅಧಿಕ ರಕ್ತದೊತ್ತಡ, ಹೃದಯ ಸಂಬಂಧಿತ ಸಮಸ್ಯೆ ಹಾಗೂ ಮೌಂಟೇನ್ ಸಿಕ್ನೆಸ್ ಸಾವಿಗೆ ಕಾರಣ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೇ 3 ರಿಂದ ಚಾರ್ ಧಾಮ್ ಯಾತ್ರೆ ಆರಂಭವಾಗಿದ್ದು, ಎರಡು ವಾರ ಕಳೆಯುವಷ್ಟರಲ್ಲೇ 39 ಯಾತ್ರಾರ್ಥಿಗಳು ಮೃತಪಟ್ಟಿದ್ದಾರೆ.




